ಪ್ರಿಯಾಂಕಾಗೆ ಮುತ್ತಿಟ್ಟ ರಾಹುಲ್ 
ದೇಶ

'ಅಣ್ಣ ತಂಗಿಯರ ಈ ಬಂಧ-ಜನುಮ-ಜನುಮಗಳ ಅನುಬಂಧ': ವೇದಿಕೆ ಮೇಲೆ ಮುದ್ದು ತಂಗಿಗೆ ಮುತ್ತಿಟ್ಟ ಅಣ್ಣ; ರಾಹುಲ್-ಪ್ರಿಯಾಂಕಾ ಪ್ರೀತಿಗೆ ನೆಟ್ಟಿಗರು ಫಿದಾ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನ ಎಷ್ಟು ಪ್ರೀತಿಸುತ್ತಾರೆ. ಇವರಿಬ್ಬರ ಬಾಂಧವ್ಯ ಎಂಥದ್ದು ಅನ್ನೋದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ದೆಹಲಿ: ಭಾರತ್ ಜೋಡೋ ಯಾತ್ರೆ ದೆಹಲಿಯಿಂದ ಉತ್ತರ ಪ್ರದೇಶ ಪ್ರವೇಶಿಸುತ್ತಿದ್ದಂತೆ ಲೋನಿ ಗಡಿಯಲ್ಲಿ ಯಾತ್ರೆಯನ್ನು ಬರಮಾಡಿಕೊಂಡಿದ್ದ ಪ್ರಿಯಾಂಕಾ ಗಾಂಧಿ, ತಮ್ಮ ಸಹೋದರನ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನ ಎಷ್ಟು ಪ್ರೀತಿಸುತ್ತಾರೆ. ಇವರಿಬ್ಬರ ಬಾಂಧವ್ಯ ಎಂಥದ್ದು ಅನ್ನೋದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ಭಾರತ್ ಜೋಡೋ ಯಾತ್ರೆಯ ವೇದಿಕೆ ಮೇಲೆ ರಾಹುಲ್ ಗಾಂಧಿ ಅವರು ತಮಗಿಂತ 2 ವರ್ಷ ಚಿಕ್ಕವರಾದ ತಂಗಿ ಪ್ರಿಯಾಂಕಾರಿಗೆ ಅಪ್ಪಿ ಸಿಹಿ ಮುತ್ತುಗಳನ್ನು ನೀಡಿರುವ ವಿಡಿಯೋವನ್ನು ಕಾಂಗ್ರೆಸ್ ಟ್ವೀಟ್ ಮಾಡಿದ್ದು ಇದು ಎಲ್ಲೆಡೆ ವೈರಲ್ ಆಗುತ್ತಿದೆ. ನೆಟ್ಟಿಗರು ಅಣ್ಣ-ತಂಗಿಯ ಪ್ರೀತಿ, ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದಲ್ಲಿ “ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಯವರೊಂದಿಗೆ ಸೇರಿಕೊಂಡರು. ಬಳಿಕ ಭಾರತ್ ಜೋಡೋ ಯಾತ್ರೆ ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ತಂಗಿಯ ಭುಜದ ಮೇಲೆ ಕೈಯಿಟ್ಟು ಏನೋ ಹೇಳಿದರು.

ಆಗ ಪ್ರಿಯಾಂಕಾ ಗಾಂಧಿ ವಾದ್ರಾ ಮುಗುಳ್ನಕ್ಕರು. ನಂತರ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನು ತಮ್ಮ ಹತ್ತಿರ ಎಳೆದುಕೊಂಡು, ಅಪ್ಪಿ ಅವರ ಕೆನ್ನೆಗಳಿಗೆ ಮುತ್ತಿಟ್ಟು ನಕ್ಕರು. ಈ ಪ್ರೀತಿಯ ಕ್ಷಣಗಳನ್ನು ವ್ಯಕ್ತಪಡಿಸುವ ವಿಡಿಯೋವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನೆರೆದಿದ್ದವರು ಒನ್ಸ್‌ ಮೋರ್ ಅಂದ್ರೂ ರಾಹುಲ್ ಗಾಂಧಿ ಅವರನ್ನು ನಿರಾಸೆಗೊಳಿಸಲಿಲ್ಲ.. ಪ್ರಿಯಾಂಕಾ ಅವರನ್ನ ಬಿಗಿದಪ್ಪಿಕೊಂಡು ಖುಷಿಯಲ್ಲಿ ತೇಲಾಡಿದ್ರು.. ಅಣ್ಣ-ತಂಗಿಯ ಈ ಸಲುಗೆಯ ದೃಶ್ಯ ನೋಡುಗರು ಉಬ್ಬೇರುವಂತೆ ಮಾಡಿದ್ದಂತೂ ಸುಳ್ಳಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT