ಶಬರಿಮಲೆ 
ದೇಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ಕುರಿತು ಸಿನೆಮಾ: ಹೊಗಳಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ಧ್ವಂಸ

ಶಬರಿಮಲೆ ಅಯ್ಯಪ್ಪ ದೇವರ ಬಗ್ಗೆ ಹೊಸತಾಗಿ ಬಿಡುಗಡೆಯಾದ ಚಲನಚಿತ್ರವನ್ನು ಹಾಡಿ ಹೊಗಳಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್‌ಗಳ ಬಗ್ಗೆ ಆಕ್ರೋಶಗೊಂಡ ಕೆಲ ಅಪರಿಚಿತ ವ್ಯಕ್ತಿಗಳು ಇಲ್ಲಿನ ಸಿಪಿಐ ಪದಾಧಿಕಾರಿಯೊಬ್ಬರ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. 

ಮಲಪ್ಪುರಂ: ಶಬರಿಮಲೆ ಅಯ್ಯಪ್ಪ ದೇವರ ಬಗ್ಗೆ ಹೊಸತಾಗಿ ಬಿಡುಗಡೆಯಾದ ಚಲನಚಿತ್ರವನ್ನು ಹಾಡಿ ಹೊಗಳಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್‌ಗಳ ಬಗ್ಗೆ ಆಕ್ರೋಶಗೊಂಡ ಕೆಲ ಅಪರಿಚಿತ ವ್ಯಕ್ತಿಗಳು ಇಲ್ಲಿನ ಸಿಪಿಐ ಪದಾಧಿಕಾರಿಯೊಬ್ಬರ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. 

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸಿ ಪ್ರಗಿಲೇಶ್ ಎಂಬುವವರ ಬೆಳಕು ಮತ್ತು ಧ್ವನಿ ಸೇವೆಯ ಅಂಗಡಿಯನ್ನು ಜನವರಿ 1 ರ ರಾತ್ರಿ ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಅಂಗಡಿಯ ಬಳಿ ಇರಿಸಲಾಗಿದ್ದ ಹಲವಾರು ಹೊಸದಾಗಿ ತಯಾರಿಸಿದ ಬೋರ್ಡ್‌ಗಳು ಮತ್ತು ಅಲಂಕಾರಿಕ ದೀಪಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. 

‘ಮಲಿಕಪ್ಪುರಂ’ ಚಿತ್ರವನ್ನು ಹೊಗಳಿರುವುದರಿಂದ ಅಂಗಡಿ ಮೇಲೆ ದಾಳಿ ನಡೆಸುವುದಾಗಿ ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಸಿಪಿಐನ ಸ್ಥಳೀಯ ಮುಖಂಡ ಪ್ರಗಿಲೇಶ್ ಹೇಳಿಕೊಂಡಿದ್ದರು. ನಟ ಉನ್ನಿ ಮುಕುಂದನ್ ಮುಖ್ಯ ಪಾತ್ರದಲ್ಲಿ, ಶಬರಿಮಲೆಗೆ ಭೇಟಿ ನೀಡಿ ಅಯ್ಯಪ್ಪ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಬಲವಾದ ಆಸೆಯನ್ನು ಹೊಂದಿರುವ ಪುಟ್ಟ ಹಳ್ಳಿಯ ಹುಡುಗಿಯ ಕಥೆಯನ್ನು ಚಿತ್ರ ವಿವರಿಸುತ್ತದೆ.

ಇತ್ತೀಚೆಗೆ ನಾನು ಚಲನಚಿತ್ರವನ್ನು ಹೊಗಳಿ ಕೆಲವು ಪೋಸ್ಟ್‌ಗಳನ್ನು ಹಾಕಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಚರ್ಚೆಗಳು ನಡೆದಿವೆ. ನಂತರ ನನ್ನ ಮೇಲೆ ಮತ್ತು ನನ್ನ ಅಂಗಡಿಯ ಮೇಲೆ ದಾಳಿ ಮಾಡುವುದಾಗಿ ಕೆಲವರು ಬೆದರಿಕೆ ಹಾಕಿದ್ದರು ಎಂದು ಪ್ರಗಿಲೇಶ್ ಹೇಳಿಕೊಂಡಿದ್ದಾರೆ. 

ಭಾರತೀಯ ದಂಡ ಸಂಹಿತೆ ಸೆಕ್ಷನ್ 427 ಮತ್ತು 435 ರ ಅಡಿಯಲ್ಲಿ ಆಸ್ತಿ ನಾಶಪಡಿಸಿದ ಪ್ರಕರಣ ದಾಖಲಿಸಲಾಗಿದೆ. ಮಾಲೀಕರು ನೀಡಿರುವ ದೂರಿನ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೆರುಂಬದಪ್ಪು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT