ಅಪಘಾತಕ್ಕೆ ಕಾರಣವಾದ ಟ್ರಕ್ 
ದೇಶ

ಮರುಕಳಿಸಿದ ದೆಹಲಿ ಮಾದರಿಯ ಅಪಘಾತ: ಸ್ಕೂಟಿಗೆ ಡಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್!

ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. 

ಲಖನೌ: ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರು 20 ವರ್ಷದ ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ.

ಬಾಂದಾ ಜಿಲ್ಲೆಯ ಮಾವಿ ಬುಜುರ್ಗ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಟ್ರಕ್ ಚಾಸಿಸ್ ಗೆ ಮಹಿಳೆಯ ದೇಹ ಸಿಲುಕಿಕೊಂಡಿದ್ದು ಬಳಿಕ ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿದೆ, ಸಂತ್ರಸ್ತೆಯ ಸ್ಕೂಟಿ ಸುಟ್ಟುಹೋಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮಹಿಳೆಯ ಮೃತದೇಹವನ್ನು ಟ್ರಕ್ ನಿಂದ ಹೊರತೆಗೆಯಲಾಗಿದೆ

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ಮಾತನಾಡಿರುವ ವಿವಿಯೊಂದರ ಪಿಆರ್ ಒ ಬಿಕೆ ಗುಪ್ತ, ಸಂತ್ರಸ್ತೆಯನ್ನು ಪುಷ್ಪ ಎಂದು ಗುರುತಿಸಿದ್ದು, ವಿವಿಯಲ್ಲಿ ಆಕೆ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದ್ದಾರೆ. ಆಕೆ ಮನೆಗೆ ಅಗತ್ಯವಿರುವ ಪದಾರ್ಥಗಳನ್ನು ತರಲು ಹಾಗೂ ಪೆಟ್ರೋಲ್ ತುಂಬಿಸಿಕೊಂಡು ಬರಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಮಹಿಳೆಯ ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದ ಬಳಿಕ ಮಹಿಳೆಯ ದೇಹ ಟ್ರಕ್ ನ ಅಡಿ ಸಿಲುಕಿಕೊಂಡಿದೆ. ಇದನ್ನು ಗಮನಿಸಿದ ಹಲವರು ಟ್ರಕ್ ನ್ನು ನಿಲ್ಲಿಸಲು ಯತ್ನಿಸಿದ್ದಾರಾದರೂ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸಿಲ್ಲ. ನೋ ಬ್ರೇಕರ್ಸ್ ಪ್ರದೇಶದಲ್ಲಿ ಈ ಅಪಘಾತ ಉಂಟಾಗಿದೆ. 

ಮೃತ ಮಹಿಳೆ ಲಖನೌ ನಿವಾಸಿಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಆರೋಪಿ ಚಾಲಕನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT