ದೇಶ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಪುನಾರಂಭ, ಸಂಜೆ ವೇಳೆಗೆ ಹರಿಯಾಣ ಪ್ರವೇಶಿಸುವ ನಿರೀಕ್ಷೆ

Ramyashree GN

ಶಾಮ್ಲಿ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಗುರುವಾರ ಬೆಳಗ್ಗೆ 6 ಗಂಟೆಗೆ ಇಲ್ಲಿನ ಐಲುಮ್ ಗ್ರಾಮದಿಂದ ತನ್ನ ಪ್ರಯಾಣವನ್ನು ಪುನರಾರಂಭಿಸಿತು. ಮೈ ಕೊರೆಯುವ ಚಳಿಯ ನಡುವೆಯೂ ತ್ರಿವರ್ಣ ಧ್ವಜವನ್ನು ಹೊತ್ತ ನೂರಾರು ಜನರು ಒಳನಾಡಿನಲ್ಲಿ ಮೆರವಣಿಗೆ ನಡೆಸಿದರು.

ಪಾದಯಾತ್ರೆ ಪುನರಾರಂಭಗೊಳ್ಳುವ ಮುನ್ನ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ದೆಹಲಿಯಿಂದ ಗ್ರಾಮಕ್ಕೆ ಆಗಮಿಸಿದ್ದಾರೆ ಎಂದು ಕಾಂಗ್ರೆಸ್ ಉತ್ತರ ಪ್ರದೇಶ ಘಟಕದ ವಕ್ತಾರ ಅಂಶು ಅವಸ್ತಿ ತಿಳಿಸಿದ್ದಾರೆ.

ಗುರುವಾರ ಸಂಜೆಯ ವೇಳೆಗೆ ಪಾದಯಾತ್ರೆ ಹರಿಯಾಣದ ಪಾಣಿಪತ್‌ಗೆ ಪ್ರವೇಶಿಸುವ ನಿರೀಕ್ಷೆಯಿದೆ. 80 ಸದಸ್ಯರನ್ನು ಲೋಕಸಭೆಗೆ ಕಳುಹಿಸುವ ರಾಜಕೀಯವಾಗಿ ನಿರ್ಣಾಯಕ ರಾಜ್ಯದಲ್ಲಿ ತನ್ನ ಯಾತ್ರೆಯನ್ನು ಕೊನೆಗೊಳಿಸಲಿದೆ.

ಯಾತ್ರೆಯ ಬಹುಪಾಲು ಉದ್ದಕ್ಕೂ ಬಿಳಿ ಟಿ-ಶರ್ಟ್ ಧರಿಸಿ ಕಾಣಿಸಿಕೊಂಡಿದ್ದ ರಾಹುಲ್ ಗಾಂಧಿ, ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ಬ್ರಿಜ್ಲಾಲ್ ಖಾಬ್ರಿ ಅವರಂತಹ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡರು. ಯಾತ್ರೆಯು ಶಾಮ್ಲಿ ಜಿಲ್ಲೆಯ ಮೂಲಕ ಸಾಗಿತು.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಜನವರಿ 30 ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ಅವರ ರಾಷ್ಟ್ರಧ್ವಜಾರೋಹಣದೊಂದಿಗೆ ಕೊನೆಗೊಳ್ಳಲಿದೆ.

ಬುಧವಾರ, ಸಮಾಜವಾದಿ ಪಕ್ಷದ ಮಿತ್ರಪಕ್ಷವಾದ ರಾಷ್ಟ್ರೀಯ ಲೋಕದಳದ ಜಿಲ್ಲಾ ಘಟಕದ ಮುಖ್ಯಸ್ಥ ರಾಂಪಾಲ್ ಧಾಮಾ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಬಾಗ್‌ಪತ್‌ನಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡರು.

SCROLL FOR NEXT