ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ಉದ್ಘಾಟಿಸಿದ ಒಡಿಶಾ ಸಿಎಂ 
ದೇಶ

ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ಉದ್ಘಾಟಿಸಿದ ಒಡಿಶಾ ಸಿಎಂ; ವಿಶ್ವಕಪ್ ಗೆದ್ದರೆ ಪ್ರತಿ ಕ್ರೀಡಾಪಟುವಿಗೂ 1 ಕೋಟಿ ರೂ. ಬಹುಮಾನ ಘೋಷಣೆ

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗುರುವಾರ (ಜ.05) ರಂದು ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ನ್ನು ರೂರ್ಕೆಲಾದಲ್ಲಿ ಉದ್ಘಾಟಿಸಿದ್ದಾರೆ. 

ರೂರ್ಕೆಲಾ: ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗುರುವಾರ (ಜ.05) ರಂದು ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ನ್ನು ರೂರ್ಕೆಲಾದಲ್ಲಿ ಉದ್ಘಾಟಿಸಿದ್ದಾರೆ. 

ಜ.13 ರಂದು ಎಫ್ಐಹೆಚ್ ಹಾಕಿ ಪುರುಷರ ವಿಶ್ವಕಪ್ ಪಂದ್ಯ ನಡೆಯಲಿದ್ದು, ಇದಕ್ಕೂ ಕೆಲವೇ ದಿನಗಳ ಮುನ್ನ ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಮ್ ಉದ್ಘಾಟನೆಗೊಂಡಿದೆ. 

ಸುಮಾರು 260 ಕೋಟಿ ರೂಪಾಯಿ ವೆಚ್ಚದಲ್ಲಿ, ದಾಖಲೆಯ 15 ತಿಂಗಳಲ್ಲಿ  ವಿಶ್ವದರ್ಜೆಯ ಬಿರ್ಸಾ ಮುಂಡಾ ಹಾಕಿ ಸ್ಟೇಡಿಯಮ್ (ಬಿಎಂಹೆಚ್ಎಸ್) ನ್ನು ಸುಮಾರು 20,000 ಮಂದಿ ವೀಕ್ಷಿಸುವ ಸಾಮರ್ಥ್ಯದೊಂದಿಗೆ ನಿರ್ಮಿಸಲಾಗಿದೆ.

ಹೊಸದಾಗಿ ನಿರ್ಮಿಸಲಾಗಿರುವ ಸ್ಟೇಡಿಯಂ ನಲ್ಲಿ 44 ಪಂದ್ಯಗಳ ಪೈಕಿ 20 ಪಂದ್ಯಗಳನ್ನಾಡಲಾಗುತ್ತದೆ. ಫೈನಲ್ಸ್ ಸೇರಿ ಉಳಿದ 24 ಪಂದ್ಯಗಳನ್ನು ಭುವನೇಶ್ವರದ ಕಾಳಿಂಗ ಕ್ರೀಡಾಂಗಣದಲ್ಲಿ ಆಡಲಾಗುತ್ತದೆ.
 
ಸ್ಟೇಡಿಯಮ್ ಕ್ಯಾಂಪಸ್ ನಲ್ಲಿ  85 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ವಿಶ್ವಕಪ್ ಗ್ರಾಮವನ್ನೂ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಿದರು.  ಈ ಸಂಕೀರ್ಣದಲ್ಲಿ ಅಭ್ಯಾಸ ಪಿಚ್, ಫಿಟ್ನೆಸ್ ಕೇಂದ್ರ, ಹೈಡ್ರೋಥೆರೆಪಿ ಪೂಲ್, ಡ್ರೆಸ್ಸಿಂಗ್ ಹಾಗೂ ಬದಲಾವಣೆ ಕೊಠಡಿ 225 ಕೊಠಡಿಗಳನ್ನು ಹೊಂದಿರುವ ವಸತಿ ಸಂಕೀರ್ಣಗಳಿದ್ದು, ಕೇವಲ 9 ತಿಂಗಳ ಅವಧಿಯಲ್ಲಿ ನಿರ್ಮಾಣಗೊಂಡಿದ್ದು 400 ಕ್ರೀಡಾಪಟುಗಳಿಗೆ ಆಗುವ ವ್ಯವಸ್ಥೆಯನ್ನು ಹೊಂದಿರುವ ಪಂಚತಾರ ಸೌಲಭ್ಯಗಳಿವೆ.

ಹಾಕಿ ಇಂಡಿಯಾ ಇಲ್ಲಿ ಸೇವೆಗಳನ್ನು ಒದಗಿಸುವುದಕ್ಕೆ ತಾಜ್ ಗ್ರೂಪ್ ನ್ನು ಕರೆತರಲಾಗಿದೆ. ಉದ್ಘಾಟನೆಯ ಬಳಿಕ ಭಾರತೀಯ ಹಾಕಿ ತಂಡದೊಂದಿಗೆ ಸಂವಹನ ನಡೆಸಿದ ಒಡಿಶಾ ಸಿಎಂ ವಿಶ್ವಕಪ್ ಗೆದ್ದರೆ ಪ್ರತಿ ಕ್ರೀಡಾಪಟುವಿಗೂ ತಲಾ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT