ಜಾರ್ಖಂಡ್ ಸರ್ಕಾರದ ನಿರ್ಧಾರವನ್ನು ಖಂಡಿಸಿ ಜೈನ ಸಮುದಾಯದ ಪ್ರತಿಭಟನೆ 
ದೇಶ

ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಮತ್ತೋರ್ವ ಜೈನ ಸನ್ಯಾಸಿ ನಿಧನ

ಶ್ರೀ ಸಮ್ಮದ್ ಶಿಖರ್ ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಮೃತಪಟ್ಟಿದ್ದಾರೆ. 

ಜಾರ್ಖಂಡ್: ಶ್ರೀ ಸಮ್ಮದ್ ಶಿಖರ್ ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಮೃತಪಟ್ಟಿದ್ದಾರೆ. 

ಜೈಪುರದಲ್ಲಿ ಸಮರ್ಥ್ ಸಾಗರ್ ನಿಧನರಾಗಿದ್ದು, ಕಳೆದ 5 ದಿನಗಳಿಂದ ಅವರು ಸಲ್ಲೇಖನ ವ್ರತ ಕೈಗೊಂಡಿದ್ದರು. ಇದಕ್ಕೂ ಮುನ್ನ ಇದೇ ವಿಷಯವಾಗಿ ಜೈನ ಸನ್ಯಾಸಿ ಸುಗ್ಯೇಯಸಾಗರ ಮಹಾರಾಜ್ (72)  ಸರ್ಕಾರದ ನಿರ್ಧಾರವನ್ನು ಖಂಡಿಸಿ ಉಪವಾಸ ಕೈಗೊಂಡು ದೇವಾಲಯದಲ್ಲಿ ಸಾವನ್ನಪ್ಪಿದ್ದರು.

ಜಾರ್ಖಂಡ್ ನ ಪಾರಸ್ನಾಥ್ ಕೇಂದ್ರ ಜೈನ ತೀರ್ಥಯಾತ್ರೆ ಕ್ಷೇತ್ರವಾಗಿದ್ದು, ಅಲ್ಲಿನ ರಾಜ್ಯ ಸರ್ಕಾರ ಅದನ್ನು ಪ್ರವಾಸಿ ಕ್ಷೇತ್ರವನ್ನಾಗಿ ಮಾರ್ಪಾಡು ಮಾಡುವುದಾಗಿ ಘೋಷಿಸಿತ್ತು. ಇದರ ವಿರುದ್ಧ ಜೈನ ಸಮುದಾಯ ತಿರುಗಿಬಿದ್ದಿದೆ.

ಆದರೆ ಕೇಂದ್ರ ಪಾರಸ್ ನಾಥ್ ಹಿಲ್ಸ್ ನಲ್ಲಿ ಎಲ್ಲಾ ರೀತಿಯ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತಡೆ ನೀಡಿದ್ದು, ಜೈನರ ಭಾವನೆಗಳನ್ನು ರಕ್ಷಿಸುವುದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT