ಜಾರ್ಖಂಡ್ ಸರ್ಕಾರದ ನಿರ್ಧಾರವನ್ನು ಖಂಡಿಸಿ ಜೈನ ಸಮುದಾಯದ ಪ್ರತಿಭಟನೆ 
ದೇಶ

ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಮತ್ತೋರ್ವ ಜೈನ ಸನ್ಯಾಸಿ ನಿಧನ

ಶ್ರೀ ಸಮ್ಮದ್ ಶಿಖರ್ ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಮೃತಪಟ್ಟಿದ್ದಾರೆ. 

ಜಾರ್ಖಂಡ್: ಶ್ರೀ ಸಮ್ಮದ್ ಶಿಖರ್ ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಮೃತಪಟ್ಟಿದ್ದಾರೆ. 

ಜೈಪುರದಲ್ಲಿ ಸಮರ್ಥ್ ಸಾಗರ್ ನಿಧನರಾಗಿದ್ದು, ಕಳೆದ 5 ದಿನಗಳಿಂದ ಅವರು ಸಲ್ಲೇಖನ ವ್ರತ ಕೈಗೊಂಡಿದ್ದರು. ಇದಕ್ಕೂ ಮುನ್ನ ಇದೇ ವಿಷಯವಾಗಿ ಜೈನ ಸನ್ಯಾಸಿ ಸುಗ್ಯೇಯಸಾಗರ ಮಹಾರಾಜ್ (72)  ಸರ್ಕಾರದ ನಿರ್ಧಾರವನ್ನು ಖಂಡಿಸಿ ಉಪವಾಸ ಕೈಗೊಂಡು ದೇವಾಲಯದಲ್ಲಿ ಸಾವನ್ನಪ್ಪಿದ್ದರು.

ಜಾರ್ಖಂಡ್ ನ ಪಾರಸ್ನಾಥ್ ಕೇಂದ್ರ ಜೈನ ತೀರ್ಥಯಾತ್ರೆ ಕ್ಷೇತ್ರವಾಗಿದ್ದು, ಅಲ್ಲಿನ ರಾಜ್ಯ ಸರ್ಕಾರ ಅದನ್ನು ಪ್ರವಾಸಿ ಕ್ಷೇತ್ರವನ್ನಾಗಿ ಮಾರ್ಪಾಡು ಮಾಡುವುದಾಗಿ ಘೋಷಿಸಿತ್ತು. ಇದರ ವಿರುದ್ಧ ಜೈನ ಸಮುದಾಯ ತಿರುಗಿಬಿದ್ದಿದೆ.

ಆದರೆ ಕೇಂದ್ರ ಪಾರಸ್ ನಾಥ್ ಹಿಲ್ಸ್ ನಲ್ಲಿ ಎಲ್ಲಾ ರೀತಿಯ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತಡೆ ನೀಡಿದ್ದು, ಜೈನರ ಭಾವನೆಗಳನ್ನು ರಕ್ಷಿಸುವುದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!