ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ 
ದೇಶ

ಕೋವಿಡ್-19 ಕುರಿತು ಭಯಬೇಡ, ಜಾಗರೂಕರಾಗಿರಿ ಮತ್ತು ವದಂತಿಗಳಿಂದ ದೂರವಿರಿ: ಕೇಂದ್ರ ಸರ್ಕಾರ

ಕೋವಿಡ್-19 ಕುರಿತು ಜನರು ಭಯಭೀತರಾಗಬಾರದು, ಜಾಗರೂಕರಾಗಿರಬೇಕು ಮತ್ತು ವದಂತಿಗಳಿಂದ ದೂರವಿರಬೇಕು  ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ನವದೆಹಲಿ: ಕೋವಿಡ್-19 ಕುರಿತು ಜನರು ಭಯಭೀತರಾಗಬಾರದು, ಜಾಗರೂಕರಾಗಿರಬೇಕು ಮತ್ತು ವದಂತಿಗಳಿಂದ ದೂರವಿರಬೇಕು  ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರು ಮಾತನಾಡಿದ್ದು, ಕೋವಿಡ್ ಕುರಿತು ಜನರು ಭಯಪಡಬಾರದು. ಕಾಲಕಾಲಕ್ಕೆ ಸರ್ಕಾರ ನೀಡುವ ನಿರ್ದೇಶನ, ಸೂಚನೆಗಳನ್ನು ಅನುಸರಿಸಬೇಕೆಂದು ಹೇಳಿದ್ದಾರೆ.

ಕೋವಿಡ್ -19 ರೂಪಾಂತರಗಳು ಬರುತ್ತಲೇ ಇರುತ್ತವೆ. ಆದರೆ, ಯಾವ ರೂಪಾಂತರವು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದು ಮುಖ್ಯ ವಿಷಯವಾಗುತ್ತದೆ. ದೇಶದಲ್ಲಿ ಯಾವುದೇ ರೀತಿಯ ಭೀತಿಯನ್ನು ತಪ್ಪಿಸಲು ಜನರು ಸರ್ಕಾರಿ ಮೂಲಗಳು ಹಂಚಿಕೊಂಡ ಮಾಹಿತಿಯನ್ನು ಮಾತ್ರ ನಂಬಬೇಕು. ಕೋವಿಡ್ ಪರಿಸ್ಥಿತಿ ಎದುರಿಸಲು ಸರಕಾರ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದರು.

ಏತನ್ಮಧ್ಯೆ, ಭಾರತದಲ್ಲಿ ಡಿಸೆಂಬರ್ 24 ರಿಂದ ಜನವರಿ 3 ರ ನಡುವೆ ವಿಮಾನ ನಿಲ್ದಾಣಗಳಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷಿಸುವಾಗ ಹನ್ನೊಂದು ರೀತಿಯ ಕೋವಿಡ್ ರೂಪಾಂತರ ವೈರಸ್ ಗಳನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೇಶಕ್ಕೆ ಬಂದ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ  ಒಟ್ಟು 19,227 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 124 ಪಾಸಿಟಿವ್ ಎಂದು ಕಂಡುಬಂದಿದ್ದು, ಸೋಂಕು ಕಂಡು ಬಂದವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಎಂದು ಮೂಲಗಳು ತಿಳಿಸಿವೆ.

124 ಮಂದಿ ಸೋಂಕಿತರ ಪೈಕಿ 40 ಮಂದಿಯ ಮಾದರಿಯನ್ನು ಜೀನೋಮ್ ಅನುಕ್ರಮಕ್ಕೆ ಕಳುಹಿಸಲಾಗಿದೆ. ಈ ಪೈಕಿ 14 ಮಂದಿಯಲ್ಲಿ ವಿವಿಧ ರೂಪಾಂತರಿ ವೈರಸ್ ಗಳು ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ.

ಈ 14 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರ ಜೀನೋಮಿಕ್ ಅನುಕ್ರಮದಲ್ಲಿ BA.5.2, BQ.1.1, BQ. 1.1(22), BQ.1.1.5, CH.1.1, CH.1.1.1, BB.3, BN.1.2, BN1.3, BY1 ಮತ್ತು BF ರೂಪಾಂತರಿ ವೈರಸ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT