ಬಂಧಿತ ಆರೋಪಿ ಆಶುತೋಷ್ 
ದೇಶ

ಕಾಂಜಾವಾಲಾ ಅಪಘಾತ ಪ್ರಕರಣ: 6ನೇ ಆರೋಪಿ ಕಾರಿನ ಮಾಲೀಕ ಬಂಧನ

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾರಿನ ಮಾಲೀಕನಾಗಿರುವ ಆಶುತೋಷ್ ಎಂಬಾತನನ್ನು ದೆಹಲಿ ಪೊಲೀಸರು ಇಂದು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಭಾಗಿಯಾಗಿದ್ದಾರೆಂದು ಹೇಳಿದ್ದರು.

ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬುವವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದರು.

"ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಬಂಧನದಲ್ಲಿರುವ ಆರೋಪಿಗಳನ್ನೂ ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್‌ಪ್ರೀತ್ ಹೂಡಾ ಅವರು ಹೇಳಿದ್ದರು. ಇದರಂತೆ ಇದೀಗ ಓರ್ವ ಆರೋಪಿ ಆಶುತೋಷ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT