ಬಂಧಿತ ಆರೋಪಿ ಆಶುತೋಷ್ 
ದೇಶ

ಕಾಂಜಾವಾಲಾ ಅಪಘಾತ ಪ್ರಕರಣ: 6ನೇ ಆರೋಪಿ ಕಾರಿನ ಮಾಲೀಕ ಬಂಧನ

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾರಿನ ಮಾಲೀಕನಾಗಿರುವ ಆಶುತೋಷ್ ಎಂಬಾತನನ್ನು ದೆಹಲಿ ಪೊಲೀಸರು ಇಂದು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಭಾಗಿಯಾಗಿದ್ದಾರೆಂದು ಹೇಳಿದ್ದರು.

ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬುವವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದರು.

"ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಬಂಧನದಲ್ಲಿರುವ ಆರೋಪಿಗಳನ್ನೂ ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್‌ಪ್ರೀತ್ ಹೂಡಾ ಅವರು ಹೇಳಿದ್ದರು. ಇದರಂತೆ ಇದೀಗ ಓರ್ವ ಆರೋಪಿ ಆಶುತೋಷ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT