ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ 
ದೇಶ

ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್‌ಗೆ ಪೊಲೀಸರ ಮಾಹಿತಿ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಗ್ಗೆ ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್‌ನಲ್ಲಿ ಮಹತ್ವದ ಹೇಳಿಕೆ ನೀಡಿದ್ದು, 2020ರ ಆಗಸ್ಟ್‌ನಲ್ಲಿ ಮೊಹಮ್ಮದ್‌ ಜುಬೇರ್‌ ಮಾಡಿರುವ ಟ್ವೀಟ್‌ನಲ್ಲಿ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ಇದಾದ ನಂತರ ಸುಪ್ರೀಂ ಕೋರ್ಟ್ ಮೊಹಮ್ಮದ್ ಜುಬೈರ್‌ಗೆ ಜಾಮೀನು ನೀಡುವಾಗ ಆತನ ಬಂಧನದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಮೊಹಮ್ಮದ್ ಜುಬೇರ್ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. 2020 ರಲ್ಲಿ ಮಾಡಿದ ಟ್ವೀಟ್ ಅನ್ನು ದೆಹಲಿ ಪೊಲೀಸರು ಹೈಕೋರ್ಟ್‌ನಲ್ಲಿ ಉಲ್ಲೇಖಿಸಿದ್ದರು. ಮತ್ತೊಂದೆಡೆ, ದೆಹಲಿ ಪೊಲೀಸರ ಪರ ಹಾಜರಾದ ವಕೀಲರು ಚಾರ್ಜ್ ಶೀಟ್‌ನಲ್ಲಿ ಜುಬೇರ್‌ನ ಹೆಸರಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ಸಮಯದಲ್ಲಿ, ದೆಹಲಿ ಹೈಕೋರ್ಟ್ ಇದೀಗ ದೆಹಲಿ ಪೊಲೀಸರಿಗೆ ಚಾರ್ಜ್ ಶೀಟ್ ಸಲ್ಲಿಸುವಂತೆ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 2ಕ್ಕೆ ಮುಂದೂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜುಬೈರ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣವನ್ನು ಪತ್ತೆ ಮಾಡಿಲ್ಲ, ಹೀಗಾಗಿ ಚಾರ್ಜ್ ಶೀಟ್‌ನಲ್ಲಿ ಜುಬೇರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ದೆಹಲಿ ಪೊಲೀಸರ ಪರವಾಗಿ ವಕೀಲರಾದ ನಂದಿತಾ ರಾವ್ ಅವರು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರ ಪೀಠಕ್ಕೆ ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT