ಎಎಪಿ-ಬಿಜೆಪಿ ಘರ್ಷಣೆ 
ದೇಶ

ಇಂದು ಎಂಸಿಡಿ ಮೇಯರ್ ಚುನಾವಣೆ ಇಲ್ಲ; ಎಎಪಿ-ಬಿಜೆಪಿ ಘರ್ಷಣೆ ನಂತರ ಸದನ ಮುಂದೂಡಿಕೆ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ಜಟಾಪಟಿಯ ನಂತರ ಹೊಸದಾಗಿ ಚುನಾಯಿತವಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(MCD)ನ ಚೊಚ್ಚಲ ಸಭೆಯು ಮೇಯರ್ ಮತ್ತು ಉಪಮೇಯರ್ ಅನ್ನು ಆಯ್ಕೆ ಮಾಡದೆಯೇ...

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ಜಟಾಪಟಿಯ ನಂತರ ಹೊಸದಾಗಿ ಚುನಾಯಿತವಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(MCD)ನ ಚೊಚ್ಚಲ ಸಭೆಯು ಮೇಯರ್ ಮತ್ತು ಉಪಮೇಯರ್ ಅನ್ನು ಆಯ್ಕೆ ಮಾಡದೆಯೇ ಮುಂದೂಡಿಕೆಯಾಗಿದೆ.

ಎಂಸಿಡಿ ಸದನ ಸಭೆಯನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಮೇಯರ್ ಚುನಾವಣಾ ಪ್ರಕ್ರಿಯೆ ಮೇಲ್ವಿಚಾರಣೆ ವಹಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಕೌನ್ಸಿಲರ್ ಸತ್ಯ ಶರ್ಮಾ ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯಾ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ಶರ್ಮಾ ಅವರು 10 ಮಂದಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸುವ ಪ್ರಕ್ರಿಯೆಯನ್ನು ಆರಂಭಿಸಿದಾಗ ಎಎಪಿ ಕೌನ್ಸಿಲರ್‌ಗಳು ಮತ್ತು ಶಾಸಕರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಮೊದಲು ಪ್ರಮಾಣ ವಚನ ಬೋಧಿಸುವಂತೆ ಒತ್ತಾಯಿಸಿದರು. ಈ ವೇಳೆ ಬಿಜೆಪಿ ಮತ್ತು ಆಪ್ ಸದಸ್ಯರ ನಡವೆ ಜಟಾಪಟಿ ಆರಂಭವಾಯಿತು.

ದೆಹಲಿ ಮಹಾನಗರ ಪಾಲಿಕೆ ಸದಸ್ಯರ ಕಚ್ಚಾಟದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶೆಲ್ಲಿ ಒಬೆರಾಯ್‌ ಮೇಯರ್‌ ಮತ್ತು ಮಹಮ್ಮದ್‌ ಇಕ್ಬಾಲ್‌ ಉಪಮೇಯರ್‌ ಸ್ಥಾನಕ್ಕೆ ಎಎಪಿ ಅಭ್ಯರ್ಥಿಗಳಾಗಿದ್ದು, ಶೆಲ್ಲಿ, ಪೂರ್ವ ಪಟೇಲ್‌ ನಗರ ವಾರ್ಡ್‌ನಿಂದ ಮೊದಲ ಸಲ ಆಯ್ಕೆಯಾಗಿದ್ದಾರೆ. ಇಕ್ಬಾಲ್‌, ಚಾಂದಿನಿ ಮಹಲ್‌ ವಾರ್ಡ್‌ನಿಂದ ಎರಡನೆ ಸಲ ಜಯಶೀಲರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT