ಅಖಿಲೇಶ್ ಯಾದವ್ 
ದೇಶ

ವಿಷ ಹಾಕಿರುವ ಅನುಮಾನ: ಲಖನೌ ಪೊಲೀಸರು ನೀಡಿದ ಟೀ ಕುಡಿಯಲು ನಿರಾಕರಿಸಿದ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ. 

ಲಖನೌ: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ. 

ಸಮಾಜವಾದಿ ಪಕ್ಷದ ನಾಯಕ ಮನೀಶ್ ಜಗನ್ ಅಗರ್ವಾಲ್ ಅವರ ವಿರುದ್ಧ ಮಹಿಳೆಯ ಬಗ್ಗೆ ಅವಮಾನಕಾರಿ ಭಾಷೆ ಪ್ರಯೋಗಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಲವು ಎಫ್ಐಆರ್ ಗಳು ದಾಖಲಾಗಿದ್ದು ಅವರನ್ನು ಬಿಡುಗಡೆ ಮಾಡಲು ಆಗ್ರಹಿಸಿ ಅಖಿಲೇಶ್ ಯಾದವ್ ಪೊಲೀಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಅಖಿಲೇಶ್ ಯಾದವ್ ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಟೀ ನೀಡಲು ಮುಂದಾಗಿದ್ದರು. 

ಆದರೆ ಪೊಲೀಸರನ್ನು ನಂಬದ ಅಖಿಲೇಶ್ ಯಾದವ್, ಟೀ ನಲ್ಲಿ ವಿಷ ಹಾಕಿರುವ ಅನುಮಾನ ವ್ಯಕ್ತಪಡಿಸಿದ್ದು, ಟೀ ಕುಡಿಯಲು ನಿರಾಕರಿಸಿದ್ದಾರೆ.

ನಾನು ಪೊಲೀಸ್ ಅಧಿಕಾರಿಗಳು ನೀಡಿರುವ ಟೀ ಕುಡಿಯುವುದಿಲ್ಲ, ನನಗೆ ಬೇಕಿರುವ ಟೀ ನ್ನು ನಾನೇ ತರಿಸಿಕೊಳ್ಳುತ್ತೇನೆ, ನಾನು ಯಾರನ್ನೂ ನಂಬುವುದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ. ಅಷ್ಟೇ ಅಲ್ಲದೇ ಅಖಿಲೇಶ್ ಯಾದವ್ ತಾವು ಹೇಳಿದಂತೆಯೇ ಬೇರೆಡೆಯಿಂದ ಚಹಾ ತರಲು ವ್ಯಕ್ತಿಯೋರ್ವರಿಗೆ ಆದೇಶಿಸುತ್ತಿರುವುದು ವೀಡಿಯೋದಲ್ಲಿ ಬಹಿರಂಗವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT