ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್ 
ದೇಶ

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ಮುಂದಿನ ವರ್ಷ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸೋಲಿಸಲು ಪಣ ತೊಟ್ಟಿರುವ ಪವನ್ ಕಲ್ಯಾಣ್, ಪ್ರತಿಪಕ್ಷಗಳ ಮತಗಳು ಚದುರದಂತೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 

ಚಂದ್ರಬಾಬು ನಾಯ್ಡು ಅವರ ಜುಬಿಲಿ ಹಿಲ್ಸ್ ನಲ್ಲಿನ ಉಭಯ ಪಕ್ಷಗಳ ಮುಖಂಡರು ಭೇಟಿಯಾಗಿದ್ದು, ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಜನಸೇನಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ ಟಿಡಿಪಿ 2018ರಿಂದ ಬಿಜೆಪಿಯೊಂದಿಗೆ ಸಖ್ಯ ತೊರೆದು ಏಕಾಂಗಿಯಾಗಿದೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ವಿಜಯವಾಡದಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿಂದಾಚೆಗೆ ಇಲ್ಲಿಯವರೆಗೂ ಉಭಯ ನಾಯಕರ ನಡುವೆ ಯಾವುದೇ ಭೇಟಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರ ಭೇಟಿ ಮಹತ್ವದ್ದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT