ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್ 
ದೇಶ

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ಮುಂದಿನ ವರ್ಷ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸೋಲಿಸಲು ಪಣ ತೊಟ್ಟಿರುವ ಪವನ್ ಕಲ್ಯಾಣ್, ಪ್ರತಿಪಕ್ಷಗಳ ಮತಗಳು ಚದುರದಂತೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 

ಚಂದ್ರಬಾಬು ನಾಯ್ಡು ಅವರ ಜುಬಿಲಿ ಹಿಲ್ಸ್ ನಲ್ಲಿನ ಉಭಯ ಪಕ್ಷಗಳ ಮುಖಂಡರು ಭೇಟಿಯಾಗಿದ್ದು, ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಜನಸೇನಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ ಟಿಡಿಪಿ 2018ರಿಂದ ಬಿಜೆಪಿಯೊಂದಿಗೆ ಸಖ್ಯ ತೊರೆದು ಏಕಾಂಗಿಯಾಗಿದೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ವಿಜಯವಾಡದಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿಂದಾಚೆಗೆ ಇಲ್ಲಿಯವರೆಗೂ ಉಭಯ ನಾಯಕರ ನಡುವೆ ಯಾವುದೇ ಭೇಟಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರ ಭೇಟಿ ಮಹತ್ವದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT