ಖುಷ್ಬೂ ಸುಂದರ್ 
ದೇಶ

ತಮಿಳುನಾಡಿನ ಬಿಜೆಪಿ ಘಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ಖುಷ್ಬೂ ಸುಂದರ್

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ನಟಿ ಖುಷ್ಬೂ ಸುಂದರ್ ಅವರು ತಮಿಳುನಾಡಿನಲ್ಲಿ ತಮ್ಮ ಪಕ್ಷದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಭಾನುವಾರ ಹೇಳಿದ್ದಾರೆ.

ಕೊಯಮತ್ತೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ನಟಿ ಖುಷ್ಬೂ ಸುಂದರ್ ಅವರು ತಮಿಳುನಾಡಿನಲ್ಲಿ ತಮ್ಮ ಪಕ್ಷದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಭಾನುವಾರ ಹೇಳಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದಲ್ಲಿ ಮಹಿಳೆಯರು ಸುರಕ್ಷಿತರಲ್ಲ ಎಂಬ ನಟಿ-ರಾಜಕಾರಣಿ ಗಾಯತ್ರಿ ರಘುರಾಮ್ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಖುಷ್ಬೂ, 'ಎಲ್ಲಾ ಮಹಿಳೆಯರು ಪಕ್ಷವನ್ನು ತೊರೆದಿಲ್ಲ. ನಾನು ಕೂಡ ಪಕ್ಷದಲ್ಲಿದ್ದೇನೆ' ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಗಾಯತ್ರಿ ರಘುರಾಮ್ ಅವರು ಜನವರಿ 3 ರಂದು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು ಮತ್ತು 'ನಿಜವಾದ ಕಾರ್ಯಕರ್ತರ ಬಗ್ಗೆ ಯಾರೊಬ್ಬರೂ ಕಾಳಜಿ ವಹಿಸುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಘಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದರು. ಅಲ್ಲದೆ, ಪಕ್ಷ ತೊರೆಯುವ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರನ್ನು ದೂಷಿಸಿದರು.

ಆದರೆ, ಪಕ್ಷವನ್ನು ತೊರೆದವರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ ಮತ್ತು ಅಂತಹ ವ್ಯಕ್ತಿಗಳು ಎಲ್ಲೇ ಇದ್ದರೂ ಚೆನ್ನಾಗಿರಲಿ ಎಂದು ಅಣ್ಣಾಮಲೈ ಶುಭ ಹಾರೈಸಿದರು.

ಡಿಎಂಕೆಯಲ್ಲಿ ಕೆಲವರು ನನ್ನ ವಿರುದ್ಧ ಕೆಲಸ ಮಾಡಿದ್ದಾರೆ ಮತ್ತು ಬಿಜೆಪಿ ತನ್ನ ಬೆಂಬಲಕ್ಕೆ ನಿಂತಿದೆ. ಅಣ್ಣಾಮಲೈ ಅವರು ಧೈರ್ಯಶಾಲಿ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಅವರು ನನ್ನ ಪರವಾಗಿ ಹೋರಾಡಿದರು ಎಂದು ಖುಷ್ಬೂ ಹೇಳಿದರು.

ವೆಲ್ಲೂರಿನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ‘ರೆಕ್ಲಾ ರೇಸ್’ (ಎತ್ತಿನ ಬಂಡಿ ಓಟ) ಧ್ವಜಾರೋಹಣ ನೆರವೇರಿಸಲು ಆಗಮಿಸಿದ್ದ ನಟಿ, ಪೊಂಗಲ್ ತಮಿಳುನಾಡಿನ ಸಾಂಪ್ರದಾಯಿಕ ಹಬ್ಬವಾಗಿದ್ದು, ಎಲ್ಲ ಮನೆಗಳಲ್ಲಿ ಸಂತಸ ತರುತ್ತದೆ ಎಂದರು.

ಆದರೆ, ಡಿಎಂಕೆ ಸರ್ಕಾರ ನೀಡಿದ ಪೊಂಗಲ್ ಉಡುಗೊರೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಕಬ್ಬು ಮತ್ತು 1,000 ರೂ.ಗಳನ್ನು ಭಿಕ್ಷೆಯಂತೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

'ತಮಿಳಗಂ' ಪದದ ಬಳಕೆಯ ಕುರಿತು ಮಾತನಾಡಿದ ಅವರು, 'ರಾಜ್ಯವನ್ನು ತಮಿಳಗಂ ಅಥವಾ ತಮಿಳುನಾಡು ಎಂದು ಕರೆಯುವುದು ತಪ್ಪಲ್ಲ. ನಾನು ಮುಂಬೈನಲ್ಲಿ ಹುಟ್ಟಿದ್ದರೂ, ನಾನು ತಮಿಳು ಮಹಿಳೆ ಮತ್ತು ಕಳೆದ 36 ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇನೆ' ಎಂದು ಹೇಳಿದರು.

ಇದಕ್ಕೂ ಮುನ್ನ ಪೊಂಗಲ್ ತಯಾರಿಸಿ ‘ರೇಕ್ಲಾ ಬಂಡಿ’ಯಲ್ಲಿ ಸ್ವಲ್ಪ ದೂರ ಪ್ರಯಾಣ ಬೆಳೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT