ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶದ ವಕೀಲೆ ಮೇಲೆ ಗ್ಯಾಂಗ್‌ ರೇಪ್: ಬಿಹಾರದ ಐಎಎಸ್ ಅಧಿಕಾರಿ, ಮಾಜಿ ಶಾಸಕರ ವಿರುದ್ಧ ಎಫ್‌ಐಆರ್

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಾಟ್ನಾ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹನ್ಸ್ ರಾಜ್ಯ ಇಂಧನ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರೆ, ಯಾದವ್ ಮಧುಬನಿ ಜಿಲ್ಲೆಯ ಝಂಜರ್‌ಪುರದ ಮಾಜಿ ಶಾಸಕರಾಗಿದ್ದಾರೆ.

2021ರಲ್ಲಿ ಅಲಹಾಬಾದ್ ಹೈಕೋರ್ಟ್‌ನ ಮಹಿಳಾ ವಕೀಲರನ್ನು ಬಿಹಾರದ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡುವುದಾಗಿ ಭರವಸೆ ನೀಡಿದ ನಂತರ ದೆಹಲಿಯ ಹೋಟೆಲ್‌ನಲ್ಲಿ ಅತ್ಯಾಚಾರವೆಸಗಿದ ಆರೋಪ ಹನ್ಸ್ ಮತ್ತು ಯಾದವ್ ಅವರ ಮೇಲಿದೆ.

ಸಂತ್ರಸ್ತೆಯ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ದಾನಪುರ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಶನಿವಾರ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು.

2021ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಸಂಬಂಧ ಪೊಲೀಸರು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದ ನಂತರ ನ್ಯಾಯಾಲಯವು ಈ ನಿರ್ದೇಶನವನ್ನು ನೀಡಿತು. ಆರಂಭದಲ್ಲಿ, ಪೊಲೀಸರು ಆರಂಭಿಕ ತನಿಖೆಯ ವರದಿಯನ್ನು ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಮಹಿಳೆಯ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ನಂತರ ದೂರುದಾರರು ಪಾಟ್ನಾ ಹೈಕೋರ್ಟ್‌ ಮೊರೆ ಹೋಗಿದ್ದರು. ಬಳಿಕ ಪ್ರಕರಣದ ಮರು ವಿಚಾರಣೆಗೆ ನ್ಯಾಯಾಲಯ ಆದೇಶಿಸಿತ್ತು. ಪಾಟ್ನಾ ಪೊಲೀಸರು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿತ್ತು.

ಘಟನೆ ನಡೆದ ಸಮಯದಲ್ಲಿ ದೂರುದಾರರೊಂದಿಗೆ ಹನ್ಸ್ ಮತ್ತು ಯಾದವ್ ಇಬ್ಬರೂ ಹೋಟೆಲ್‌ನಲ್ಲಿ ಇದ್ದರು ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

ಆಗಿನ ಶಾಸಕ ಗುಲಾಬ್ ಯಾದವ್ ಅವರು ಪಾಟ್ನಾದ ತನ್ನ ಫ್ಲಾಟ್‌ನಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತನ್ನ ಹೆಸರನ್ನು ಮಹಿಳಾ ಸಮಿತಿಗೆ ಶಿಫಾರಸು ಮಾಡಲು ಬಯೋ-ಡೇಟಾದೊಂದಿಗೆ ತನ್ನ ಫ್ಲಾಟ್‌ಗೆ ಭೇಟಿ ನೀಡುವಂತೆ ಸಂತ್ರಸ್ತೆಗೆ ಹೇಳಿದ್ದರು. ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸುವಂತೆ ದೂರು ಸಲ್ಲಿಸಿದ್ದರೂ, ಆರಂಭದಲ್ಲಿ ಪೊಲೀಸ್ ಅಧಿಕಾರಿಗಳು ಮೌನ ವಹಿಸಿದ್ದರು ಎಂದು ದೂರುದಾರರ ವಕೀಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT