ಅಪಘಾತಕ್ಕೀಡಾಗಿರುವ ಕಾರು. 
ದೇಶ

ರಸ್ತೆ ಅಪಘಾತ: ಕೇರಳ ಗೃಹ ಕಾರ್ಯದರ್ಶಿ ವಿ.ವೇಣು ಸೇರಿ 8 ಮಂದಿಗೆ ಗಾಯ

ರಸ್ತೆ ಅಪಘಾತವೊಂದರಲ್ಲಿ ಕೇರಳದ ಗೃಹ ಕಾರ್ಯದರ್ಶಿ ವಿ ವೇಣು, ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಸೇರಿ 8 ಮಂದಿ ಗಾಯಗೊಂಡಿರುವ ಘಟನೆ ಆಲಪ್ಪುಳದ ಕಾಯಂಕುಲಂ ಬಳಿಯ ಕೊಟ್ಟಂಕುಲಂಗರಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ನಡೆದಿದೆ.

ಅಲಪ್ಪುಳ: ರಸ್ತೆ ಅಪಘಾತವೊಂದರಲ್ಲಿ ಕೇರಳದ ಗೃಹ ಕಾರ್ಯದರ್ಶಿ ವಿ ವೇಣು, ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಸೇರಿ 8 ಮಂದಿ ಗಾಯಗೊಂಡಿರುವ ಘಟನೆ ಆಲಪ್ಪುಳದ ಕಾಯಂಕುಲಂ ಬಳಿಯ ಕೊಟ್ಟಂಕುಲಂಗರಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ನಡೆದಿದೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಣು ಅವರು ಕೊಚ್ಚಿ ಮುಜಿರಿಸ್ ಬಿನಾಲೆ ಕಲಾ ಪ್ರದರ್ಶನಕ್ಕೆ ಭೇಟಿ ನೀಡಿ ತಿರುವನಂತಪುರಕ್ಕೆ ಹಿಂತಿರುಗುತ್ತಿದ್ದರು ಎಂದು ಕಾಯಂಕುಲಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಂಕಾಸಿಯಿಂದ ಅಕ್ಕಿ ಮೂಟೆಗಳ ಹೊತ್ತು ಕೊಚ್ಚಿಗೆ ಬರುತ್ತಿದ್ದ ಲಾರಿಗೆ ವೇಣು ಅವರ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ವೇಣು, ಅವರ ಪತ್ನಿ ಶಾರದಾ, ಪುತ್ರ ಶಬರಿ, ಸಂಬಂಧಿಕರಾದ ಪ್ರಣವ್ ಮತ್ತು ಸೌರಭ್ ಮತ್ತು ಚಾಲಕ ಅಭಿಲಾಷ್ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡಿರುವ ಎಲ್ಲರನ್ನೂ ತಿರುವಲ್ಲಾ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವೇಣು ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT