ಮಲ್ಲಿಕಾರ್ಜುನ ಖರ್ಗೆ 
ದೇಶ

ಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಕುವ’ ನೀತಿಯೇ ಕಾರಣ: ಮಲ್ಲಿಕಾರ್ಜನ ಖರ್ಗೆ

ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೇಸರಿ ಪಕ್ಷದ ಬಳಸಿ ಬಿಸಾಕುವ ಮತ್ತು ದ್ರೋಹ ಮಾಡುವ...

ನವದೆಹಲಿ: ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೇಸರಿ ಪಕ್ಷದ "ಬಳಸಿ ಬಿಸಾಕುವ ಮತ್ತು ದ್ರೋಹ ಮಾಡುವ" ನೀತಿಯೇ ಅವರ ದುಸ್ಥಿತಿಗೆ ಕಾರಣ ಎಂದು ಹೇಳಿದ್ದಾರೆ.

"ತಮ್ಮ 'ಜೀವದ ಹಕ್ಕು' ಮತ್ತು 'ಸ್ಥಳಾಂತರ'ಕ್ಕೆ ಒತ್ತಾಯಿಸಿ ಕಾಶ್ಮೀರಿ ಪಂಡಿತ ನೌಕರರು 245ಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ತಿಂಗಳಿಂದ ಅವರ ಸಂಬಳವನ್ನು ತಡೆಹಿಡಿಯಲಾಗಿದೆ ಮತ್ತು ಅವರ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳಲಾಗುತ್ತಿದೆ" ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಕುವ, ದ್ರೋಹ ಮಾಡುವ’ ನೀತಿಯೇ ಕಾರಣ ಎಂದು ಖರ್ಗೆ ಆರೋಪಿಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಚದೂರದಲ್ಲಿ ಕಚೇರಿಯಲ್ಲಿಯೇ ಕಾಶ್ಮೀರಿ ಪಂಡಿತ್ ಉದ್ಯೋಗಿ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ಹತ್ಯೆಯ ನಂತರ ಕಾಶ್ಮೀರಿ ಪಂಡಿತ ನೌಕರರು ಕೆಲಸಕ್ಕೆ ಮರಳಲು ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT