ಒಮರ್ ಅಬ್ದುಲ್ಲಾ 
ದೇಶ

'ಕಾಶ್ಮೀರಿಗಳು ಭಿಕ್ಷುಕರಲ್ಲ; ಚುನಾವಣೆ ನಮ್ಮ ಹಕ್ಕು: ಒಮರ್ ಅಬ್ದುಲ್ಲಾ

ಚುನಾವಣೆ ಜನರ ಹಕ್ಕು. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಕಾಶ್ಮೀರಿಗಳು ಕೇಂದ್ರದ ಮುಂದೆ ಭಿಕ್ಷೆ ಬೇಡುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಮಂಗಳವಾರ ಹೇಳಿದ್ದಾರೆ.

ಶ್ರೀನಗರ: ಚುನಾವಣೆ ಜನರ ಹಕ್ಕು. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಕಾಶ್ಮೀರಿಗಳು ಕೇಂದ್ರದ ಮುಂದೆ ಭಿಕ್ಷೆ ಬೇಡುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಮಂಗಳವಾರ ಹೇಳಿದ್ದಾರೆ.

"ಈ ವರ್ಷ ಚುನಾವಣೆ ನಡೆಯದಿದ್ದರೂ ಪರವಾಗಿಲ್ಲ! ಆದರೆ ನಾವು ಭಿಕ್ಷುಕರಲ್ಲ. ಕಾಶ್ಮೀರಿಗಳು ಭಿಕ್ಷುಕರಲ್ಲ ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ. ಚುನಾವಣೆ ನಮ್ಮ ಹಕ್ಕು ಆದರೆ ಈ ಹಕ್ಕಿಗಾಗಿ ನಾವು ಕೇಂದ್ರದ ಮುಂದೆ ಭಿಕ್ಷೆ ಬೇಡುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ತಿಳಿಸಿದ್ದಾರೆ.

ಇಂದು ಅನಂತನಾಗ್ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒಮರ್ ಅಬ್ದುಲ್ಲಾ ಅವರು, ಜನ ಮತ್ತೆ ಚುನಾವಣೆ ನಡೆಸಬೇಕು ಎಂದು ಬಯಸುತ್ತಾರೆ. ನಮಗೆ ಚುನಾವಣೆಗಳು ಬೇಕು. ಆದರೆ ಅವರು ಅದನ್ನು ಮಾಡಲು ಬಯಸದಿದ್ದರೆ, ಹಾಗೆಯೇ ಆಗಲಿ ಎಂದಿದ್ದಾರೆ.

ಆಸ್ತಿಗಳು ಮತ್ತು ಸರ್ಕಾರಿ ಭೂಮಿಯಿಂದ ಜನರನ್ನು ತೆರವುಗೊಳಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯದಿರಲು ಇದು ಒಂದು ಕಾರಣ ಎಂದರು.

ಅದಕ್ಕಾಗಿಯೇ ಅವರು ಚುನಾವಣೆ ನಡೆಸುತ್ತಿಲ್ಲ. ಜನರಿಗೆ ಕಿರುಕುಳ ನೀಡಲು ಅವರು ಬಯಸುತ್ತಾರೆ. ಜನರ ಗಾಯಗಳಿಗೆ ಮುಲಾಮು ಹಚ್ಚುವ ಬದಲು, ಅವರು ನೋವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ" ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT