ಶಬರಿಮಲೆ 
ದೇಶ

ಶಬರಿಮಲೆ ದೇವಸ್ಥಾನದೊಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಫೋಟೋಗಳನ್ನು ಭಕ್ತರು ತರಬಾರದು: ಕೇರಳ ಹೈಕೋರ್ಟ್

ಮಾಲಾಧಾರಿಗಳು ಶಬರಿಮಲೆ ಒಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ತರುವುದನ್ನು ತಡೆಯುವಂತೆ ಶಬರಿಮಲೆ ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಆದೇಶಿಸಿದೆ.

ತಿರುವನಂತಪುರಂ: ಮಾಲಾಧಾರಿಗಳು ಶಬರಿಮಲೆ ಒಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ತರುವುದನ್ನು ತಡೆಯುವಂತೆ ಶಬರಿಮಲೆ ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಆದೇಶಿಸಿದೆ.

ದೇವಾಲಯದ ಆವರಣದಲ್ಲಿ ಮಾಲಾಧಾರಿಗಳು ಭಕ್ತಿಪೂರ್ವಕವಾಗಿ ದೇವರಿಗೆ ಪೂಜೆ ಮಾಡುವಂತೆ ಕ್ರಮಕೈಗೊಳ್ಳುವಂತೆ ಮಂಡಳಿಗೆ ನ್ಯಾಯಾಲಯ ಸೂಚಿಸಿದೆ. ಭಕ್ತರು ಚಲನಚಿತ್ರ ತಾರೆಯರು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳನ್ನು ಹಿಡಿದು ಸಂಗೀತ ವಾದ್ಯಗಳೊಂದಿಗೆ ಪ್ರದರ್ಶನ ನೀಡುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿಜಿ ಅಜಿತ್ ಕುಮಾರ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ನ್ಯಾಯಾಲಯದ ಪ್ರಕಾರ, 'ಸ್ವಾಮಿ ಅಯ್ಯಪ್ಪನಿಗೆ ಭಕ್ತಿ ಮತ್ತು ಆರಾಧನೆಯನ್ನು ತೋರಿಸುವ 'ಆರಾಧಕ' ಶಬರಿಮಲೆ ಸಂಪ್ರದಾಯ ಮತ್ತು ಸಂಪ್ರದಾಯದ ಅಡಿಯಲ್ಲಿ ಅಭ್ಯಾಸದ ರೀತಿಯಲ್ಲಿ ಪೂಜೆ ಮಾಡುವ ಹಕ್ಕನ್ನು ಚಲಾಯಿಸಲು ಬದ್ಧನಾಗಿರಬೇಕು. ಅದನ್ನು ಬಿಟ್ಟು ಸೆಲೆಬ್ರಿಟಿಗಳ ಮತ್ತು ರಾಜಕಾರಣಿಗಳ ಫೋಟೋ ತರುವುದು ಸೂಕ್ತವಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಶಬರಿಮಲೆಯ ಗರ್ಭಗುಡಿ ಉದ್ಘಾಟನೆ ವೇಳೆ ಡೋಲು ವಾದಕ ಶಿವಮಣಿ ಅವರಿಗೆ ಡೋಲು ಬಾರಿಸಲು ಅವಕಾಶ ನೀಡಿರುವ ಬಗ್ಗೆ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಯಾವುದೇ ಯಾತ್ರಿಕರಿಗೆ ಸೋಪಾನದ ಮುಂದೆ ಡೋಲು ಅಥವಾ ಇತರ ವಾದ್ಯಗಳನ್ನು ಬಾರಿಸಲು ಅವಕಾಶವಿಲ್ಲ ಎಂದು ಹೇಳಿದೆ.

ಶಬರಿಮಲೆ ಭಕ್ತರೊಬ್ಬರು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ದೂರು ಸಲ್ಲಿಸಿದ ನಂತರ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!