ಆರೋಪಿ ಅಫ್ತಾಬ್ ಪೂನಾವಾಲ 
ದೇಶ

ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. 

ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. 

ಆರೋಪಿ ಪೂನಾವಾಲನನ್ನು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿತು. 

ಜನವರಿ 6 ರಂದು ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತಾರಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT