ಉತ್ತರಾಖಂಡದ ಜೋಶಿಮಠದ ಬಳಿಕ ಆಲಿಗಢದ ಮನೆಗಳಲ್ಲಿ ಕಾಣಿಸಿಕೊಂಡ ಬಿರುಕು 
ದೇಶ

ಉತ್ತರಾಖಂಡದ ಜೋಶಿಮಠದ ಬಳಿಕ ಉತ್ತರ ಪ್ರದೇಶದ ಅಲಿಗಢದ ಮನೆಗಳಲ್ಲಿ ಬಿರುಕು, ನಿವಾಸಿಗಳಲ್ಲಿ ಆತಂಕ

ಉತ್ತರಾಖಂಡದ ಜೋಶಿಮಠದ ಬಳಿಕ ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಹಲವಾರು ಮನೆಗಳು ಬಿರುಕು ಬಿಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಆಲಿಗಢ: ಉತ್ತರಾಖಂಡದ ಜೋಶಿಮಠದ ಬಳಿಕ ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಹಲವಾರು ಮನೆಗಳು ಬಿರುಕು ಬಿಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಆಲಿಗಢ ಮುನ್ಸಿಪಲ್ ಕಾರ್ಪೊರೇಶನ್‌ನ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್ ಮಾತನಾಡಿ, 'ನಾವು ನಮ್ಮ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತೇವೆ ಮತ್ತು ಇದು ಏಕೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸಲಾಗುವುದು' ಎಂದು ಹೇಳಿದರು.

ಸ್ಥಳೀಯರ ಪ್ರಕಾರ, ಸರ್ಕಾರದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಪೈಪ್‌ಲೈನ್ ಹಾಕಲಾಗಿದ್ದು, ಈಗ ಅದು ಸೋರಿಕೆಯಾಗುತ್ತಿದೆ. ಇದು ಮನೆಗಳಲ್ಲಿ ಬಿರುಕುಗಳ ಕಾಣಿಸಿಕೊಳ್ಳಲು ಕಾರಣವಾಗಿದೆ  ಎಂದು ವರದಿಯಾಗಿದೆ.

ಕನ್ವರಿಗಂಜ್ ಪ್ರದೇಶದಲ್ಲಿನ ಮನೆಗಳಲ್ಲಿ ಬಿರುಕುಗಳು ಮತ್ತು ಸೋರಿಕೆಯಾಗುತ್ತಿರುವುದು ವರದಿಯಾಗಿದೆ.
3-4 ದಿನಗಳು ಕಳೆದಿವೆ. ಈ ಬಗ್ಗೆ ಇಲಾಖೆಗೆ ತಿಳಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮನ್ನು ಭಯಭೀತರಾಗಿ ಬದುಕುವಂತೆ ಮಾಡಲಾಗುತ್ತಿದೆ' ಎಂದು ಸ್ಥಳೀಯ ನಿವಾಸಿ ಮನ್ಸೂರ್ ಅಲಿ ತಿಳಿಸಿದ್ದಾರೆ.

ಜೋಶಿಮಠವು ದೊಡ್ಡ ಪ್ರದೇಶದಲ್ಲಿ ಕುಸಿತ ಕಂಡಿದ್ದರಿಂದ ಈ ತಿಂಗಳ ಆರಂಭದಲ್ಲಿ ನೂರಾರು ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಳ್ಳಲು ಆರಂಭಿಸಿದರು ಎಂಬುದನ್ನು ಸ್ಮರಿಸಬಹುದು. ಹಲವಾರು ಕುಟುಂಬಗಳನ್ನು ಈಗಾಗಲೇ ಅಲ್ಲಿಂದ ಸ್ಥಳಾಂತರಿಸಲಾಗಿದೆ. ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಅಥವಾ ಬಾಡಿಗೆ ಮನೆಗಳಿಗೆ ತೆರಳುವಂತೆ ಹಲವು ಕುಟುಂಬಗಳಿಗೆ ಸೂಚಿಸಲಾಗಿದೆ.

ಈ ಪ್ರದೇಶದಲ್ಲಿ 86 ಮನೆಗಳನ್ನು ಅಸುರಕ್ಷಿತ ವಲಯ ಎಂದು ಗುರುತಿಸಲಾಗಿದೆ. ಜೋಶಿಮಠದ ಜಿಲ್ಲಾಡಳಿತವು ಮುಳುಗುತ್ತಿರುವ ಪಟ್ಟಣದಲ್ಲಿ ವಾಸಿಸಲು ಅಸುರಕ್ಷಿತವಾಗಿರುವ ಮನೆಗಳ ಮೇಲೆ ರೆಡ್ ಕ್ರಾಸ್ ಗುರುತುಗಳನ್ನು ಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT