ಮಲ್ಲಿಕಾರ್ಜುನ ಖರ್ಗೆ 
ದೇಶ

ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ: ಮಲ್ಲಿಕಾರ್ಜನ ಖರ್ಗೆ

ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.

ನವದೆಹಲಿ: ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುವ ಮೂಲಕ ಬಿಜೆಪಿ 'ಸಂವಿಧಾನದ ಸ್ಪಷ್ಟ ಉಲ್ಲಂಘನೆ' ಮಾಡುತ್ತಿದೆ. ಭಾರತೀಯ ರಾಜಕೀಯದ ಫೆಡರಲ್ ರಚನೆಯನ್ನು ಭ್ರಷ್ಟಗೊಳಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ  ರವಿ ಅವರು ಮುಖಾಮುಖಿಯಾಗಿದ್ದರು. ಅಲ್ಲಿ ಆಡಳಿತಾರೂಢ ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸದನದಲ್ಲಿ ತಮ್ಮ ಸಾಂಪ್ರದಾಯಿಕ ಭಾಷಣದಿಂದ ಹೊರಗುಳಿದ ರಾಜ್ಯಪಾಲರ ವಿರುದ್ಧ ನಿರ್ಣಯವನ್ನು ಮಂಡಿಸಿದರು.

'ರಾಜ್ಯಪಾಲರು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅವರು ಭಾಗವಾಗಿರುವ ಶಾಸಕಾಂಗವನ್ನು ಅವಮಾನಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಅಶಾಂತಿಯನ್ನು ಸೃಷ್ಟಿಸಲು ಅವರನ್ನು ದೆಹಲಿಯ ಹೈಕಮಾಂಡ್ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಅಪಾಯಕಾರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ