ಮಲ್ಲಿಕಾರ್ಜುನ ಖರ್ಗೆ 
ದೇಶ

ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ: ಮಲ್ಲಿಕಾರ್ಜನ ಖರ್ಗೆ

ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.

ನವದೆಹಲಿ: ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುವ ಮೂಲಕ ಬಿಜೆಪಿ 'ಸಂವಿಧಾನದ ಸ್ಪಷ್ಟ ಉಲ್ಲಂಘನೆ' ಮಾಡುತ್ತಿದೆ. ಭಾರತೀಯ ರಾಜಕೀಯದ ಫೆಡರಲ್ ರಚನೆಯನ್ನು ಭ್ರಷ್ಟಗೊಳಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ  ರವಿ ಅವರು ಮುಖಾಮುಖಿಯಾಗಿದ್ದರು. ಅಲ್ಲಿ ಆಡಳಿತಾರೂಢ ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸದನದಲ್ಲಿ ತಮ್ಮ ಸಾಂಪ್ರದಾಯಿಕ ಭಾಷಣದಿಂದ ಹೊರಗುಳಿದ ರಾಜ್ಯಪಾಲರ ವಿರುದ್ಧ ನಿರ್ಣಯವನ್ನು ಮಂಡಿಸಿದರು.

'ರಾಜ್ಯಪಾಲರು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅವರು ಭಾಗವಾಗಿರುವ ಶಾಸಕಾಂಗವನ್ನು ಅವಮಾನಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಅಶಾಂತಿಯನ್ನು ಸೃಷ್ಟಿಸಲು ಅವರನ್ನು ದೆಹಲಿಯ ಹೈಕಮಾಂಡ್ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಅಪಾಯಕಾರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!