ರಾಹುಲ್ ಗಾಂಧಿ 
ದೇಶ

ದೇಶದ ಭ್ರಾತೃತ್ವ ಮತ್ತು ಏಕತೆಯಿಂದ ಭಾರತ್ ಜೋಡೋ ಯಾತ್ರೆ ಯಶಸ್ವಿ: ರಾಹುಲ್ ಗಾಂಧಿ

ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ಬುಧವಾರ ಪ್ರತಿಪಾದಿಸಿದ್ದಾರೆ.

ಫತೇಘರ್ ಸಾಹಿಬ್(ಪಂಜಾಬ್): ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ಬುಧವಾರ ಪ್ರತಿಪಾದಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ ಇಂದು ಪಂಜಾಬ್ ಪ್ರವೇಶಿಸುವ ಮುನ್ನಗುರುದ್ವಾರ ಫತೇಘರ್ ಸಾಹಿಬ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,  ಬಿಜೆಪಿಯು ದೇಶದಲ್ಲಿ ಭಯ ಮತ್ತು ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮತ್ತು ಆರೆಸ್ಸೆಸ್ ನವರು ದೇಶವನ್ನು ವಿಭಜಿಸಿ, ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮವನ್ನು, ಒಂದು ಜಾತಿಯ ವಿರುದ್ಧ ಇನ್ನೊಂದು ಜಾತಿಯನ್ನು, ಒಂದು ಭಾಷೆಯ ವಿರುದ್ಧ ಇನ್ನೊಂದು ಭಾಷೆಯನ್ನು ಎತ್ತಿಕಟ್ಟಿ ದೇಶದಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಇದರಿಂದ ಭಾತೃತ್ವದ ವಾತಾವರಣ ಹಾಳಾಗುತ್ತಿದೆ ಎಂದರು.

ದೇಶದಲ್ಲಿ ಪ್ರೀತಿ, ಏಕತೆ, ಭ್ರಾತೃತ್ವದ ನೆಲೆಸಬೇಕು ಎಂಬ ಉದ್ದೇಶದಿಂದ ಈ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಅಪಾರ ಜನಸ್ಪಂದನೆ ವ್ಯಕ್ತವಾಗಿದೆ. ಒಂದು ರಾಜ್ಯಕ್ಕಿಂತ ಮತ್ತೊಂದು ರಾಜ್ಯದಲ್ಲಿ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದಿದ್ದಾರೆ.

ಮಾಧ್ಯಮಗಳು ತಮ್ಮ "ಸ್ನೇಹಿತ"ರೂ ಎಂದು ಕರೆದ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪ್ರಧಾನಿ ನರೇಂದ್ರ ಮೋದಿಯವರ ಮುಖವನ್ನು ಹಗಲಿರುಳು ತೋರಿಸುತ್ತಿವೆ. ಆದರೆ ನಿರುದ್ಯೋಗ ಅಥವಾ ಹಣದುಬ್ಬರದಂತಹ ಸಮಸ್ಯೆಗಳನ್ನು ತೋರಿಸುತ್ತಿಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT