ಜಪ್ತಿ ಮಾಡಿದ ಟ್ಯಾಂಕ್ 
ದೇಶ

ಕೇರಳ: ಹೈಡ್ರೋಜನ್ ಪೆರಾಕ್ಸೈಡ್ ಮಿಶ್ರಿತ 15,300 ಲೀಟರ್ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ

ಕೊಲ್ಲಂ ಆರ್ಯನಕಾವು ಗಡಿ ತಪಾಸಣಾ ಕೇಂದ್ರದಲ್ಲಿ 15,300 ಲೀಟರ್ ಕಲಬೆರಕೆ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಅನ್ನು ಹೈನುಗಾರಿಕೆ ಇಲಾಖೆ ಬುಧವಾರ ವಶಪಡಿಸಿಕೊಂಡಿದೆ. 

ಕೊಲ್ಲಂ: ಕೊಲ್ಲಂ ಆರ್ಯನಕಾವು ಗಡಿ ತಪಾಸಣಾ ಕೇಂದ್ರದಲ್ಲಿ 15,300 ಲೀಟರ್ ಕಲಬೆರಕೆ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಅನ್ನು ಹೈನುಗಾರಿಕೆ ಇಲಾಖೆ ಬುಧವಾರ ವಶಪಡಿಸಿಕೊಂಡಿದೆ. 

ಅಧಿಕಾರಿಗಳ ಪ್ರಕಾರ, ವಶಪಡಿಸಿಕೊಂಡಿರುವ ಹಾಲಿನಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಮಿಶ್ರಣ ಮಾಡಲಾಗಿದೆ.

ತಮಿಳುನಾಡಿನ ವಿರುದುನಗರ ಜಿಲ್ಲೆಯ ವಡಿಯೂರ್ ಗ್ರಾಮದಿಂದ ಈ ಹಾಲನ್ನು ತರಲಾಗಿದ್ದು, ಪತ್ತನಂತಿಟ್ಟದ ಪಂದಳಂಗೆ ಈ ಟ್ಯಾಂಕ್ ತೆರಳುತ್ತಿತ್ತು. ಪುನಲೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಹಾಲಿನ ಟ್ಯಾಂಕರ್ ಅನ್ನು ವಶಕ್ಕೆ ಪಡೆದಿದೆ.

ಆಹಾರ ಸುರಕ್ಷತಾ ಇಲಾಖೆಯು ಹಾಲಿನಲ್ಲಿರುವ ಹೈಡ್ರೋಜನ್ ಪೆರಾಕ್ಸೈಡ್ ಶೇಕಡಾವಾರು ಪ್ರಮಾಣವನ್ನು ಪರೀಕ್ಷಿಸಲು ತಿರುವನಂತಪುರಂನಲ್ಲಿರುವ ಲ್ಯಾಬ್‌ಗೆ ಈ ಹಾಲಿನ ಮಾದರಿಯನ್ನು ಕಳುಹಿಸಿದೆ.  ಅದರ ಫಲಿತಾಂಶ ಇಂದು ಬರಲಿದ್ದು, ಫಲಿತಾಂಶದ ಆಧಾರದ ಮೇಲೆ ನಾವು ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕೊಲ್ಲಂನ ಆಹಾರ ಸುರಕ್ಷತಾ ಇಲಾಖೆಯ ನೋಡಲ್ ಅಧಿಕಾರಿ ಸುಜಿತ್ ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT