ಪ್ರಾತಿನಿಧಿಕ ಚಿತ್ರ 
ದೇಶ

ಬಲ್ಲಿಯಾ: ಬೀದಿ ನಾಯಿ ಬೊಗಳಿದ್ದಕ್ಕೆ ಎರಡು ಕುಟುಂಬಗಳ ನಡುವೆ ಘರ್ಷಣೆ; ಮಹಿಳೆ ಸಾವು, ಐವರಿಗೆ ಗಾಯ

ಬೀದಿನಾಯಿ ಬೊಗಳಿದ್ದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಿಂದಾಗಿ 50 ವರ್ಷದ ಮಹಿಳೆ ಸಾವಿಗೀಡಾಗಿದ್ದು, ಅವರ ಕುಟುಂಬದ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಲ್ಲಿಯಾ: ಬೀದಿನಾಯಿ ಬೊಗಳಿದ್ದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಿಂದಾಗಿ 50 ವರ್ಷದ ಮಹಿಳೆ ಸಾವಿಗೀಡಾಗಿದ್ದು, ಅವರ ಕುಟುಂಬದ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದರು.

ಬೈರಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಾಯಿ ಬೊಗಳುವುದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಪರಸ್ಪರ ಜಗಳವಾಗಿದೆ. ಮಂಗಳವಾರ ರಾತ್ರಿ ನಡೆದ ಘಟನೆಯಲ್ಲಿ ಐವತ್ತು ವರ್ಷದ ಲಾಲ್ ಮುನಿ ಮತ್ತು ಇತರ ಐವರು ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗಾ ಪ್ರಸಾದ್ ತಿವಾರಿ ಬುಧವಾರ ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ ಆರೋಪಿ ಕುಟುಂಬ ಬೀದಿ ನಾಯಿಗೆ ಆಹಾರ ನೀಡುತ್ತಿತ್ತು. ಮಂಗಳವಾರ ರಾತ್ರಿ ಸಂತ್ರಸ್ತೆ ಲಾಲ್ ಮುನಿ ಅವರು ಆರೋಪಿ ಕುಟುಂಬದವರ ಮನೆ ಬಳಿಯಿಂದ ಹೋಗುತ್ತಿದ್ದಾಗ ನಾಯಿ ಬೊಗಳಲು ಆರಂಭಿಸಿದೆ. ಈ ಬಗ್ಗೆ ಮುನಿ ಮನೆಯವರಿಗೆ ದೂರು ನೀಡಿದಾಗ, ಆಕ್ರೋಶಗೊಂಡು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ವೇಳೆ ಲಾಲ್ ಮುನಿಯ ಕುಟುಂಬಸ್ಥರೂ ಅಲ್ಲಿಗೆ ಬಂದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಪೊಲೀಸ್ ದೂರಿನ ಪ್ರಕಾರ, ಆರೋಪಿಗಳು ಮತ್ತು ಅವರ ಕುಟುಂಬ ಸದಸ್ಯರು ಲಾಲ್ ಮುನಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಮರದ ಕೋಲುಗಳಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದಾಗಿ ಗಾಯೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಾಲ್ ಮುನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮುನಿ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದರು.

ಘಟನೆಗೆ ಸಂಬಂಧಿಸಿದಂತೆ ನಾವು ಶಿವ ಸಾಗರ್ ಬಿಂದ್ ಮತ್ತು ಅವರ ಮಗ ಅಜಿತ್ ಅವರನ್ನು ಬಂಧಿಸಿದ್ದೇವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT