ಜೈರಾಮ್ ರಮೇಶ್ 
ದೇಶ

ನ್ಯಾಯಾಂಗದ ಮೇಲೆ ಅಸಾಧಾರಣ ದಾಳಿ: ಉಪ ರಾಷ್ಟ್ರಪತಿ ಧಂಕರ್ ಹೇಳಿಕೆಗೆ ಕಾಂಗ್ರೆಸ್ ಕಿಡಿ

1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನೀಡಿರುವ ಹೇಳಿಕೆ "ನ್ಯಾಯಾಂಗದ ಮೇಲೆ ನಡೆದ ಅಸಾಧಾರಣ ದಾಳಿ" ಎಂದು ಕಾಂಗ್ರೆಸ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: 1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನೀಡಿರುವ ಹೇಳಿಕೆ "ನ್ಯಾಯಾಂಗದ ಮೇಲೆ ನಡೆದ ಅಸಾಧಾರಣ ದಾಳಿ" ಎಂದು ಕಾಂಗ್ರೆಸ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.

ಉಪರಾಷ್ಟ್ರಪತಿ ಧಂಕರ್ ಅವರು 2015 ರಲ್ಲಿ ಎನ್‌ಜೆಎಸಿ ಕಾಯ್ದೆ ರದ್ದುಗೊಳಿಸಿರುವುದನ್ನು ಟೀಕಿಸಿದ್ದಾರೆ ಮತ್ತು ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿದ್ದಾರೆ. ಸಂಸತ್ತು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು, ಆದರೆ ಅದರ ಮೂಲ ರಚನೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಕೋರ್ಟ್‌ನ ಮೇಲೆ ತುಂಬು ಗೌರವದಿಂದಲೇ, ನಾನು ಇದನ್ನು ಒಪ್ಪೋದಿಲ್ಲ ಎಂದು ಧಂಕರ್ ಹೇಳಿದ್ದರು.

"ನಾನು 18 ವರ್ಷಗಳಿಂದ ಸಂಸದನಾಗಿದ್ದೇನೆ. ಆದರೆ 1973 ರ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಯಾರೂ ಟೀಕಿಸಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್‌ ಮಾಡಿದ್ದಾರೆ.

"ವಾಸ್ತವವಾಗಿ, ಅರುಣ್ ಜೇಟ್ಲಿಯಂತಹ ಬಿಜೆಪಿಯ ಕಾನೂನು ದಿಗ್ಗಜರು ಸಹ ಈ ತೀರ್ಪನ್ನು ಒಂದು ಮೈಲಿಗಲ್ಲು ಎಂದು ಶ್ಲಾಘಿಸಿದ್ದಾರೆ. ಈಗ, ರಾಜ್ಯಸಭಾ ಅಧ್ಯಕ್ಷರು ಇದು ತಪ್ಪು ಎಂದು ಹೇಳುತ್ತಾರೆ. ಇದು ನ್ಯಾಯಾಂಗದ ಮೇಲೆ ಅಸಾಧಾರಣ ದಾಳಿ!" ಎಂದು ಅವರು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT