ಜೈರಾಮ್ ರಮೇಶ್ 
ದೇಶ

ನ್ಯಾಯಾಂಗದ ಮೇಲೆ ಅಸಾಧಾರಣ ದಾಳಿ: ಉಪ ರಾಷ್ಟ್ರಪತಿ ಧಂಕರ್ ಹೇಳಿಕೆಗೆ ಕಾಂಗ್ರೆಸ್ ಕಿಡಿ

1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನೀಡಿರುವ ಹೇಳಿಕೆ "ನ್ಯಾಯಾಂಗದ ಮೇಲೆ ನಡೆದ ಅಸಾಧಾರಣ ದಾಳಿ" ಎಂದು ಕಾಂಗ್ರೆಸ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: 1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನೀಡಿರುವ ಹೇಳಿಕೆ "ನ್ಯಾಯಾಂಗದ ಮೇಲೆ ನಡೆದ ಅಸಾಧಾರಣ ದಾಳಿ" ಎಂದು ಕಾಂಗ್ರೆಸ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.

ಉಪರಾಷ್ಟ್ರಪತಿ ಧಂಕರ್ ಅವರು 2015 ರಲ್ಲಿ ಎನ್‌ಜೆಎಸಿ ಕಾಯ್ದೆ ರದ್ದುಗೊಳಿಸಿರುವುದನ್ನು ಟೀಕಿಸಿದ್ದಾರೆ ಮತ್ತು ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿದ್ದಾರೆ. ಸಂಸತ್ತು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು, ಆದರೆ ಅದರ ಮೂಲ ರಚನೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಕೋರ್ಟ್‌ನ ಮೇಲೆ ತುಂಬು ಗೌರವದಿಂದಲೇ, ನಾನು ಇದನ್ನು ಒಪ್ಪೋದಿಲ್ಲ ಎಂದು ಧಂಕರ್ ಹೇಳಿದ್ದರು.

"ನಾನು 18 ವರ್ಷಗಳಿಂದ ಸಂಸದನಾಗಿದ್ದೇನೆ. ಆದರೆ 1973 ರ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಯಾರೂ ಟೀಕಿಸಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್‌ ಮಾಡಿದ್ದಾರೆ.

"ವಾಸ್ತವವಾಗಿ, ಅರುಣ್ ಜೇಟ್ಲಿಯಂತಹ ಬಿಜೆಪಿಯ ಕಾನೂನು ದಿಗ್ಗಜರು ಸಹ ಈ ತೀರ್ಪನ್ನು ಒಂದು ಮೈಲಿಗಲ್ಲು ಎಂದು ಶ್ಲಾಘಿಸಿದ್ದಾರೆ. ಈಗ, ರಾಜ್ಯಸಭಾ ಅಧ್ಯಕ್ಷರು ಇದು ತಪ್ಪು ಎಂದು ಹೇಳುತ್ತಾರೆ. ಇದು ನ್ಯಾಯಾಂಗದ ಮೇಲೆ ಅಸಾಧಾರಣ ದಾಳಿ!" ಎಂದು ಅವರು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT