ಅಮಾನತು (ಸಾಂಕೇತಿಕ ಚಿತ್ರ) 
ದೇಶ

ಕರ್ತವ್ಯ ಲೋಪ: ಸಕಲೇಶಪುರ ಆರ್ ಎಫ್ಒ ಅಮಾನತು

ಸಕಲೇಶಪುರ ಅರಣ್ಯಾಧಿಕಾರಿ ಎಸ್ಎಲ್ ಶಿಲ್ಪಾ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಹಾಸನ: ಸಕಲೇಶಪುರ ಅರಣ್ಯಾಧಿಕಾರಿ ಎಸ್ಎಲ್ ಶಿಲ್ಪಾ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿರುವ ಪ್ರಧಾನ ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಅಮಾನತು ಆದೇಶವನ್ನು ಪ್ರಕಟಿಸಿದ್ದಾರೆ. ಅರಣ್ಯದಲ್ಲಿ ನಡೆಯುತ್ತಿರುವ ಕಳ್ಳತನವನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣ ನೀಡಿ ಅಮಾನತುಗೊಳಿಸಲಾಗಿದೆ.

ಅಷ್ಟೇ ಅಲ್ಲದೇ ಅರಣ್ಯದಲ್ಲಿ ಕಳವಾಗಿರುವ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಭೌತಿಕ ಹಾಗೂ ಆರ್ಥಿಕ ಟಾರ್ಗೆಟ್ ಗಳನ್ನು ತಲುಪಲು ಅರಣ್ಯಾಧಿಕಾರಿ ವಿಫಲರಾಗಿದ್ದಾರೆ. ಆನೆಗಳ ಕಾಟವನ್ನು ತಡೆಗಟ್ಟಲು ವಿಫಲರಾಗಿದ್ದಾರೆ, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿದ್ದಾರೆ ಎಂಬುದೇ ಮೊದಲಾದ ಆರೋಪಗಳನ್ನು ಎಸ್ಎಲ್ ಶಿಲ್ಪಾ ಅವರ ವಿರುದ್ಧ ಹೊರಿಸಲಾಗಿದೆ. 

ಎಸ್ಎಲ್ ಶಿಲ್ಪಾ ಅವರು ನಿರಂತರ ನಿರ್ದೇಶನ ಹಾಗೂ ಎಚ್ಚರಿಕೆಯ ಹೊರತಾಗಿಯೂ ತಪ್ಪುಗಳನ್ನು ಸರಿಪಡಿಸಿಕೊಳ್ಳಲಿಲ್ಲ. ಈ ಹಿನ್ನೆಲೆಯಲ್ಲಿ ಪಿಸಿಸಿಎಫ್ ಸಹ ಆಕೆಯ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT