ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿ

ವಿಶಾಖಪಟ್ಟಣಂನ ರೈಲ್ವೆ ಯಾರ್ಡ್‌ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್‌ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣಂ: ಇಲ್ಲಿನ ರೈಲ್ವೆ ಯಾರ್ಡ್‌ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್‌ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 15 ರಂದು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವಿನ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.

ಕಂಚರಪಾಲೆಂನ ಕೋಚ್ ಕಾಂಪ್ಲೆಕ್ಸ್ ಬಳಿ ಆಟವಾಡುತ್ತಿದ್ದ ಕೆಲವು ಮಕ್ಕಳು ಬುಧವಾರ ರಾತ್ರಿ ರೈಲಿಗೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಹಾನಿ ಸಂಭವಿಸಿದೆ ಎಂದು ರೈಲ್ವೇ ರಕ್ಷಣಾ ಪಡೆ ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ತನಿಖೆಯಲ್ಲಿ ವಿಶಾಖಪಟ್ಟಣಂ ಪೊಲೀಸರು ಮತ್ತು ಆರ್‌ಪಿಎಫ್‌ ನಡೆಸಿದ ತನಿಖೆಯಲ್ಲಿ ಈ ವಿಚಾರ ತಿಳಿದುಬಂದಿದೆ. ನಿರ್ವಹಣೆ ತಪಾಸಣೆಗಾಗಿ ವಂದೇ ಭಾರತ್ ರೈಲಿನ ಕುಂಟೆ ಬುಧವಾರ ಚೆನ್ನೈನಿಂದ ವಿಶಾಖಪಟ್ಟಣಕ್ಕೆ ಆಗಮಿಸಿತ್ತು.

ಒಂದು ಕಿಟಕಿಯ ಗಾಜು ಸಂಪೂರ್ಣವಾಗಿ ಒಡೆದು ಹೋಗಿದ್ದರೆ, ಮತ್ತೊಂದರಲ್ಲಿ ಸಣ್ಣ ಬಿರುಕು ಮೂಡಿದೆ. ಅಪರಾಧ ಎಸಗಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT