ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿ

ವಿಶಾಖಪಟ್ಟಣಂನ ರೈಲ್ವೆ ಯಾರ್ಡ್‌ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್‌ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣಂ: ಇಲ್ಲಿನ ರೈಲ್ವೆ ಯಾರ್ಡ್‌ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್‌ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 15 ರಂದು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವಿನ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.

ಕಂಚರಪಾಲೆಂನ ಕೋಚ್ ಕಾಂಪ್ಲೆಕ್ಸ್ ಬಳಿ ಆಟವಾಡುತ್ತಿದ್ದ ಕೆಲವು ಮಕ್ಕಳು ಬುಧವಾರ ರಾತ್ರಿ ರೈಲಿಗೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಹಾನಿ ಸಂಭವಿಸಿದೆ ಎಂದು ರೈಲ್ವೇ ರಕ್ಷಣಾ ಪಡೆ ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ತನಿಖೆಯಲ್ಲಿ ವಿಶಾಖಪಟ್ಟಣಂ ಪೊಲೀಸರು ಮತ್ತು ಆರ್‌ಪಿಎಫ್‌ ನಡೆಸಿದ ತನಿಖೆಯಲ್ಲಿ ಈ ವಿಚಾರ ತಿಳಿದುಬಂದಿದೆ. ನಿರ್ವಹಣೆ ತಪಾಸಣೆಗಾಗಿ ವಂದೇ ಭಾರತ್ ರೈಲಿನ ಕುಂಟೆ ಬುಧವಾರ ಚೆನ್ನೈನಿಂದ ವಿಶಾಖಪಟ್ಟಣಕ್ಕೆ ಆಗಮಿಸಿತ್ತು.

ಒಂದು ಕಿಟಕಿಯ ಗಾಜು ಸಂಪೂರ್ಣವಾಗಿ ಒಡೆದು ಹೋಗಿದ್ದರೆ, ಮತ್ತೊಂದರಲ್ಲಿ ಸಣ್ಣ ಬಿರುಕು ಮೂಡಿದೆ. ಅಪರಾಧ ಎಸಗಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT