ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ಮೋದಿ. 
ದೇಶ

ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ ಮಾತನಾಡಿದ ಮೋದಿಯವರು, ಸಂಘರ್ಷ, ಯುದ್ಧ ಮತ್ತು ಭಯೋತ್ಪಾದನೆಯಿಂದ ಉದ್ಭವಿಸುವ ವಿವಿಧ ಜಾಗತಿಕ ಸವಾಲುಗಳನ್ನು ಉಲ್ಲೇಖಿಸಿದರು.

ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬೆಲೆ, ಕೋವಿಡ್-19ರ ಆರ್ಥಿಕ ಪರಿಣಾಮ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ನೈಸರ್ಗಿಕ ವಿಕೋಪಗಳ ಬಗ್ಗೆ ಮೋದಿಯವರು ಕಳವಳ ವ್ಯಕ್ತಪಡಿಸಿದರು.

"ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂಬುದು ಸ್ಪಷ್ಟವಾಗಿದೆ. "ಅಸ್ಥಿರತೆಯ ಸ್ಥಿತಿ" ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟ ಸಾಧ್ಯ ಎಂದು ವಿವಿಧ ಅಭಿವೃದ್ಧಿಶೀಲ ರಾಷ್ಟ್ರಗಳ ಹಲವಾರು ನಾಯಕರ ಉಪಸ್ಥಿತಿಯಲ್ಲಿ ಹೇಳಿದರು

ಭಾರತವು ಯಾವಾಗಲೂ ತನ್ನ ಅಭಿವೃದ್ಧಿಯ ಅನುಭವವನ್ನು "ಜಾಗತಿಕ ದಕ್ಷಿಣದ ಸಹೋದರರೊಂದಿಗೆ" ಹಂಚಿಕೊಂಡಿದೆ. ಭಾರತವು ಈ ವರ್ಷ ತನ್ನ ಜಿ 20 ಅಧ್ಯಕ್ಷತೆಯನ್ನು ಪ್ರಾರಂಭಿಸಿದ್ದು, ಜಾಗತಿಕ ದಕ್ಷಿಣದ ಧ್ವನಿಯನ್ನು ವರ್ಧಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಜಾಗತಿಕ ದಕ್ಷಿಣದ ರಾಷ್ಟ್ರಗಳನ್ನು ಒಟ್ಟುಗೂಡಿಸಲು ಭಾರತವು ಎರಡು ದಿನಗಳ ಶೃಂಗಸಭೆಯನ್ನು ಆಯೋಜಿಸುತ್ತಿದೆ ಮತ್ತು ಉಕ್ರೇನ್ ಸಂಘರ್ಷದಿಂದ ಪ್ರಚೋದಿಸಲ್ಪಟ್ಟ ಆಹಾರ ಮತ್ತು ಇಂಧನ ಭದ್ರತೆ ಸೇರಿದಂತೆ ವಿವಿಧ ಜಾಗತಿಕ ಸವಾಲುಗಳಿಗೆ ಸಂಬಂಧಿಸಿದ ಅವರ ಸಾಮಾನ್ಯ ಕಾಳಜಿಗಳನ್ನು ಹಂಚಿಕೊಳ್ಳಲು ಅವರಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ ಎಂದರು.

ಶೃಂಗಸಭೆಯು ಹತ್ತು ಸಭೆಗಳನ್ನು ಯೋಜಿಸಿದ್ದು ಅದರಲ್ಲಿ ನಾಲ್ಕು ಸಭೆಗಳು ಗುರುವಾರ ನಡೆಯಲಿದೆ. ಆರು ಸಭೆಗಳು ಶುಕ್ರವಾರ ನಡೆಯಲಿವೆ. ಪ್ರತಿ ಅಧಿವೇಶನದಲ್ಲಿ 10-20 ದೇಶಗಳ ನಾಯಕರು ಮತ್ತು ಸಚಿವರುಗಳು ಭಾಗವಹಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ