ಮನೀಶ್ ಸಿಸೋಡಿಯಾ 
ದೇಶ

ಶಿಕ್ಷಕರ ತರಬೇತಿಗೆ ತಡೆ: ಬಿಜೆಪಿಯಿಂದ ಕೊಳಕು ರಾಜಕೀಯ ಎಂದ ದೆಹಲಿ ಡಿಸಿಎಂ ಸಿಸೋಡಿಯಾ

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಎಎಪಿ ಸರ್ಕಾರದ ಪ್ರಯತ್ನಗಳನ್ನು ತಡೆಯುತ್ತಿರುವ ಬಿಜೆಪಿ, ಕೊಳಕು ರಾಜಕೀಯ  ಮಾಡುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು...

ನವದೆಹಲಿ: ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಎಎಪಿ ಸರ್ಕಾರದ ಪ್ರಯತ್ನಗಳನ್ನು ತಡೆಯುತ್ತಿರುವ ಬಿಜೆಪಿ, "ಕೊಳಕು ರಾಜಕೀಯ"  ಮಾಡುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಡಿಸಿಎಂ, ಇದುವರೆಗೆ ಸುಮಾರು 1,100 ಶಿಕ್ಷಕರು ಸಿಂಗಾಪುರ, ಬ್ರಿಟನ್ ಮತ್ತು ಫಿನ್‌ಲ್ಯಾಂಡ್ ಸೇರಿದಂತೆ ಹಲವು ವಿದೇಶಗಳಲ್ಲಿ ತರಬೇತಿ ಪಡೆದಿದ್ದಾರೆ.

ಈಗ ಶಿಕ್ಷಣ ಇಲಾಖೆಯ ಮೇಲೆ ಹಿಡಿತ ಹೊಂದಿರುವ ಬಿಜೆಪಿಯ ಕೆಲವು ಅನಧಿಕೃತ ವ್ಯಕ್ತಿಗಳು, ದೆಹಲಿಯ ಎಎಪಿ ಸರ್ಕಾರವು ಶಿಕ್ಷಕರಿಗೆ ಉತ್ತಮ ತರಬೇತಿ ನೀಡುವುದನ್ನು ತಡೆಯುತ್ತಿದ್ದಾರೆ. ಈ ಮೂಲಕ "ಕೊಳಕು ರಾಜಕೀಯ" ಮಾಡುತ್ತಿದ್ದಾರೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮತ್ತು ಅವರ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂದು ಬಯಸುತ್ತಿದ್ದರೆ, "ಈ ಪಿತೂರಿಯಲ್ಲಿ ಬಿಜೆಪಿಯ ಪರವಾಗಿರಬಾರದು" ಎಂದು ಸಿಸೋಡಿಯಾ ಹೇಳಿದ್ದಾರೆ. 

ಸಿಸೋಡಿಯಾ ಅವರ ಆರೋಪದ ಬಗ್ಗೆ ಬಿಜೆಪಿ ಅಥವಾ ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

"ನಾವು 30 ಶಿಕ್ಷಕರ ಬ್ಯಾಚ್ ಅನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸಲು ಬಯಸಿದ್ದೇವೆ. ಆದರೆ ಲೆಫ್ಟಿನೆಂಟ್ ಗವರ್ನರ್ ಅದನ್ನು ಒಂದಲ್ಲ ಒಂದು ನೆಪ ನೀಡಿ ವಿಳಂಬ ಮಾಡುತ್ತಿದ್ದಾರೆ" ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ದೆಹಲಿ ಸರ್ಕಾರದ ಪ್ರಯತ್ನಗಳನ್ನು ತಡೆಯಲು ಬಿಜೆಪಿ ತನ್ನ ಎಲ್ಲಾ ಶಕ್ತಿಯನ್ನು ಬಳಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video