ಬಂಧಿತ ಆರೋಪಿಗಳು 
ದೇಶ

ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಅಮಾನತು ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ, ಪ್ರಕರಣದ ಕುರಿತು ದೆಹಲಿ ಪೊಲೀಸರ ನೀಡಿದ ವಿವರವಾದ ವರದಿಯನ್ನು ಆಧರಿಸಿ ಅಂದು ಮೂರು ಪಿಸಿಆರ್ ವ್ಯಾನ್‌ಗಳಲ್ಲಿ ಮತ್ತು ಎರಡು ಪೊಲೀಸ್ ಪಿಕೆಟ್‌ಗಳಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 1 ರಂದು ರಾತ್ರಿ ಅಂಜಲಿ ಸಿಂಗ್ ಎಂಬ ಯುವತಿ ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಸಿಕ್ಕಿ 20 ವರ್ಷದ ಅಂಜಲಿ ಸಿಂಗ್ ಅವರನ್ನು ಆರೋಪಿಗಳು 12 ಕಿ.ಮೀ.ವರೆಗೆ ಎಳೆದೊಯ್ದಿದ್ದರು. ಪರಿಣಾಮ ಯುವತಿ ದೇಹದ ಮೇಲೆ 40 ಗಾಯಗಳಾಗಿತ್ತು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ.

ಅಪಘಾತದ ತೀವ್ರತೆಗೆ ಆಕೆಯ ಮೆದುಳೇ ಕಾಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿದ ರೋಹಿಣಿ ಜಿಲ್ಲೆಯ ಒಟ್ಟು 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT