ಬಂಧಿತ ಆರೋಪಿಗಳು 
ದೇಶ

ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಅಮಾನತು ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ, ಪ್ರಕರಣದ ಕುರಿತು ದೆಹಲಿ ಪೊಲೀಸರ ನೀಡಿದ ವಿವರವಾದ ವರದಿಯನ್ನು ಆಧರಿಸಿ ಅಂದು ಮೂರು ಪಿಸಿಆರ್ ವ್ಯಾನ್‌ಗಳಲ್ಲಿ ಮತ್ತು ಎರಡು ಪೊಲೀಸ್ ಪಿಕೆಟ್‌ಗಳಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 1 ರಂದು ರಾತ್ರಿ ಅಂಜಲಿ ಸಿಂಗ್ ಎಂಬ ಯುವತಿ ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಸಿಕ್ಕಿ 20 ವರ್ಷದ ಅಂಜಲಿ ಸಿಂಗ್ ಅವರನ್ನು ಆರೋಪಿಗಳು 12 ಕಿ.ಮೀ.ವರೆಗೆ ಎಳೆದೊಯ್ದಿದ್ದರು. ಪರಿಣಾಮ ಯುವತಿ ದೇಹದ ಮೇಲೆ 40 ಗಾಯಗಳಾಗಿತ್ತು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ.

ಅಪಘಾತದ ತೀವ್ರತೆಗೆ ಆಕೆಯ ಮೆದುಳೇ ಕಾಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿದ ರೋಹಿಣಿ ಜಿಲ್ಲೆಯ ಒಟ್ಟು 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT