ಪ್ರಧಾನಿ ಮೋದಿ 
ದೇಶ

ವಾರಣಾಸಿಯಲ್ಲಿ ಟೆಂಟ್ ಸಿಟಿ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾರಣಾಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಿದರು ಮತ್ತು 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾರಣಾಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಿದರು ಮತ್ತು 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಪವಿತ್ರ ನಗರದ ಪ್ರಸಿದ್ಧ ಘಾಟ್‌ಗಳ ಎದುರು ಗಂಗಾನದಿಯ ದಡದಲ್ಲಿ ಅಭಿವೃದ್ಧಿಪಡಿಸಲಾದ ಈ ಟೆಂಟ್ ಸಿಟಿಯು ಈ ಪ್ರದೇಶದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ನೀಡಲಿದೆ.

ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಟೆಂಟ್ ಸಿಟಿ ಪ್ರವಾಸಿಗರಿಗೆ ಲೈವ್ ಶಾಸ್ತ್ರೀಯ ಸಂಗೀತ ಮತ್ತು ಯೋಗ ತರಬೇತಿಯ ಜೊತೆಗೆ ವಸತಿ ಸೌಕರ್ಯಗಳನ್ನು ಒದಗಿಸುತ್ತದೆ.

ಪ್ರವಾಸಿಗರು ವಾರಣಾಸಿಯ ವಿವಿಧ ಘಾಟ್‌ಗಳಿಂದ ದೋಣಿಗಳ ಮೂಲಕ ಈ ಟೆಂಟ್ ಸಿಟಿಯನ್ನು ತಲುಪಬಹುದು. ಇದು ಅಕ್ಟೋಬರ್‌ನಿಂದ ಜೂನ್‌ವರೆಗೆ ಕಾರ್ಯನಿರ್ವಹಿಸಲಿದ್ದು, ಮಳೆಗಾಲದಲ್ಲಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುವುದರಿಂದ ಮೂರು ತಿಂಗಳ ಕಾಲ ಟೆಂಟ್ ಸಿಟಿ ಬಂದ್ ಮಾಡಲಾಗುತ್ತದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಬಂದರು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT