ಬಸ್ ಮತ್ತು ಟ್ರಕ್ ನಡುವೆ ಅಪಘಾತ 
ದೇಶ

ಮಹಾರಾಷ್ಟ್ರ: ಬಸ್- ​ಟ್ರಕ್ ನಡುವೆ ಭೀಕರ​ ಅಪಘಾತ; ಶಿರಡಿಗೆ ತೆರಳುತ್ತಿದ್ದ 10 ಮಂದಿ ಯಾತ್ರಿಕರ ದಾರುಣ ಸಾವು

ಶಿರಾಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಐಷಾರಾಮಿ ಬಸ್​ ಮತ್ತು ಟ್ರಕ್​ ನಡುವೆ ಭೀಕರವಾಗಿ ಡಿಕ್ಕಿ ಸಂಭವಿಸಿ 7 ಮಹಿಳೆಯರು ಸೇರಿಂದತೆ 10 ಮಂದಿ ಮೃತಪಟ್ಟಿರುವ ಘಟನೆ ನಾಸಿಕ್​ನ ಸಿನ್ನಾರ್​ ಹೆದ್ದಾರಿಯಲ್ಲಿ ನಡೆದಿದೆ.

ಮಹಾರಾಷ್ಟ್ರ: ಶಿರಾಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಐಷಾರಾಮಿ ಬಸ್​ ಮತ್ತು ಟ್ರಕ್​ ನಡುವೆ ಭೀಕರವಾಗಿ ಡಿಕ್ಕಿ ಸಂಭವಿಸಿ 7 ಮಹಿಳೆಯರು ಸೇರಿಂದತೆ 10 ಮಂದಿ ಮೃತಪಟ್ಟಿರುವ ಘಟನೆ ನಾಸಿಕ್​ನ ಸಿನ್ನಾರ್​ ಹೆದ್ದಾರಿಯಲ್ಲಿ ನಡೆದಿದೆ.

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ರಸ್ತೆ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
 
ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತೆಹಸಿಲ್‌ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಐಷಾರಾಮಿ ಬಸ್​ನಲ್ಲಿ 50ಕ್ಕೂ ಹೆಚ್ಚು ಭಕ್ತರಿದ್ದರು. ಇವರೆಲ್ಲ ಸಾಯಿಬಾಬಾ ದರ್ಶನ ಪಡೆಯಲೆಂದು ದೇವಾಲಯಕ್ಕೆ ಹೊರಟಿರುವ ವೇಳೆ ಡಿಕ್ಕಿ ಸಂಭವಿಸಿದೆ.  ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಿನ್ನಾರ್​ ಗ್ರಾಮೀಣಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿದೆ.

ಗಾಯಗೊಂಡವರ ಪೈಕಿ 17 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವಾವಿ ಠಾಣಾ ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಒಳಗಾದ ಬಸ್​ ಪುಣೆಯ ಅಂಬೇರಿನಾಥ್​ ಪ್ರದೇಶಕ್ಕೆ ಸೇರಿದ್ದು ಎಂದು ಹೇಳಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆ ಮತ್ತು ಸಿನ್ನಾರ್‌ನಲ್ಲಿರುವ ಯಶವಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT