ಆರೋಪಿ ಶಂಕರ್ ಮಿಶ್ರಾ 
ದೇಶ

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಆರೋಪಿ ನ್ಯಾಯಾಲಯಕ್ಕೆ ಹೇಳಿದ್ದು ಏನು?

ಏರ್ ಇಂಡಿಯಾ ವಿಮಾನ ಹಾರಾಟ ಮಾರ್ಗ ಮಧ್ಯದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಮಹಿಳೆಯೇ ಆಕೆ ಕುಳಿತಿದ್ದ ಆಸನದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಗಿ ಆರೋಪಿ ಶಂಕರ್ ಮಿಶ್ರಾ ನ್ಯಾಯಾಲಯದಲ್ಲಿ ಹೇಳಿದ್ದಾರೆ. 

ನವದೆಹಲಿ:  ಏರ್ ಇಂಡಿಯಾ ವಿಮಾನ ಹಾರಾಟ ಮಾರ್ಗ ಮಧ್ಯದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಮಹಿಳೆಯೇ ಆಕೆ ಕುಳಿತಿದ್ದ ಆಸನದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಗಿ ಆರೋಪಿ ಶಂಕರ್ ಮಿಶ್ರಾ ನ್ಯಾಯಾಲಯದಲ್ಲಿ ಹೇಳಿದ್ದಾರೆ. 

ಕಳೆದ ವರ್ಷದ ನವೆಂಬರ್ 26 ರಂದು ನ್ಯೂಯಾರ್ಕ್ ನಿಂದ ನವದೆಹಲಿ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಸೀಟನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ಅಲ್ಲಿಗೆ ಹೋಗಲು ಸಾಧ್ಯವಿರಲಿಲ್ಲ. ದೂರುದಾರ ಮಹಿಳೆಯೇ ಸ್ವತಃ ಮೂತ್ರ ವಿಸರ್ಜನೆ ಮಾಡಿರುವುದಾಗಿ ಆರೋಪಿ ಶಂಕರ್ ಶರ್ಮಾ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ದೂರುದಾರ ಮಹಿಳೆ ಕಥಕ್ ಡ್ಯಾನ್ಸರ್ ಆಗಿದ್ದು, ಈ ವಿಚಾರದಲ್ಲಿ ಅವರು ನಾಟಕ ಮಾಡುತ್ತಿರುವುದಾಗಿ ಆರೋಪಿ ಹೇಳಿಕೊಂಡಿದ್ದಾರೆ. 

ವಿಮಾನದ ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗುವುದು ಅಸಾಧ್ಯವಲ್ಲ. ಕ್ಷಮಿಸಿ, ಆದರೆ ನಾನು ಸಹ ಪ್ರಯಾಣಿಸಿದ್ದೇನೆ. ಯಾರು ಬೇಕಾದರೂ ಯಾವುದೇ ಸಾಲಿನಿಂದ ಸುತ್ತಲೂ ಬಂದು ಯಾವುದೇ ಆಸನಕ್ಕೆ ಹೋಗಬಹುದು ಎಂದು ಹೇಳಿದ ಸೆಷನ್ಸ್ ನ್ಯಾಯಾಧೀಶರು. ವಿಮಾನದ ಸೀಟುಗಳ ರೇಖಾಚಿತ್ರ ಬಿಡಿಸುವಂತೆ ಅಲ್ಲಿದ್ದ ಸಿಬ್ಬಂದಿಗೆ ತಿಳಿಸಿತು. 

ಶಂಕರ್ ಮಿಶ್ರಾ ಅವರ ಕಸ್ಟಡಿಯನ್ನು ನಿರಾಕರಿಸಿ ಜನವರಿ 7 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ ಅರ್ಜಿ ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿರುವ ಪರಿಷ್ಕೃತ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಶುಕ್ರವಾರ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಲಿಲ್ಲ. ಜೈಲಿನಲ್ಲಿರುವ ಶಂಕರ್ ಮಿಶ್ರಾಗೆ ಜಾಮೀನು ಕೂಡಾ ಮಂಜೂರು ಮಾಡಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT