ಶ್ರದ್ಧಾ ವಾಲ್ಕರ್ 
ದೇಶ

ಗರಗಸದಿಂದ ಶ್ರದ್ಧಾ ದೇಹ ತುಂಡರಿಸಿದ್ದ ಅಫ್ತಾಬ್: ಮರಣೋತ್ತರ ಪರೀಕ್ಷೆಯ ಸ್ಫೋಟಕ ಮಾಹಿತಿ

ದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ.

ನವದೆಹಲಿ: ದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ.

ಹೌದು.. ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲ್ಕರ್‌ ಅವರನ್ನು ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ವಿವಿಧೆಡೆ ಎಸೆದಿದ್ದ ಆರೋಪ ಎದುರಿಸುತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ಪ್ರಕರಣದ ತನಿಖೆ ಮುಂದುವರಿದಂತೆ ಆಘಾತಕಾರಿ ಸಂಗತಿಗಳು ಹೊರಬೀಳುತ್ತಿವೆ. ಹಾಲಿ ಹೊರಬಿದ್ದಿರುವ ಮರಣೋತ್ತರ ಪರೀಕ್ಷೆಯಲ್ಲಿ ಅಫ್ತಾಬ್ ತನ್ನ ಪ್ರಿಯತಮೆಯ ದೇಹ ಕತ್ತರಿಸಲು ಗರಗಸ ಬಳಸಿದ್ದ ಎಂಬ ಅಘಾತಕಾರಿ ಅಂಶವನ್ನು ತಜ್ಞರು ಬಯಲು ಮಾಡಿದ್ದಾರೆ.

ಶ್ರದ್ಧಾ ವಾಲ್ಕರ್ ಅವರ ದೇಹವನ್ನು ಗರಗಸ ಬಳಸಿ ತುಂಡರಿಸಿರುವುದು ಮೂಳೆಗಳ ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೆಹಲಿಯ ವಿವಿಧೆಡೆ ಸಂಗ್ರಹಿಸಿದ್ದ ಶ್ರದ್ಧಾ ವಾಲಕರ್ ಅವರ 23 ಮೂಳೆಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಏಮ್ಸ್ ಆಸ್ಪತ್ರೆಗೆ ಕಳುಹಿಸಿದ್ದರು. ಗರಗಸ ಬಳಸಿ ತುಂಡರಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜನವರಿ ಕೊನೆಯ ವಾರದಲ್ಲಿ ಪ್ರಕರಣ ಕುರಿತಂತೆ ಪೊಲೀಸರು ದೆಹಲಿಯ ಸಾಕೆತ್ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.

ಶ್ರದ್ಧಾ ವಾಲಕರ್ ತಂದೆಯ ಡಿಎನ್‌ಎ ಜೊತೆ ದಕ್ಷಿಣ ದೆಹಲಿಯ ಅರಣ್ಯ ಪ್ರದೇಶದಲ್ಲಿ ಸಿಕ್ಕ ಮೂಳೆಗಳ ಡಿಎನ್‌ಎ ಹೊಂದಿಕೆಯಾದ ಹಿನ್ನೆಲೆಯಲ್ಲಿ ಮರಣೋತ್ತರ(ಮೂಳೆಗಳ ಪರೀಕ್ಷೆ) ನಡೆಸಲಾಯಿತು ಎಂದು ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ. ಆರೋಪಿ ಆಫ್ತಾಬ್‌ನ ಪಾಲಿಗ್ರಾಫ್ ಮತ್ತು ನಾರ್ಕೊ ಪರೀಕ್ಷೆಯ ವರದಿಯನ್ನು ದೆಹಲಿ ಪೊಲೀಸರು ಪಡೆದುಕೊಂಡಿದ್ದಾರೆ.

ಮೇ 18, 2022ರಂದು ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದಿದ್ದ ಆಫ್ತಾಬ್, ಆಕೆಯ ಮೃತದೇಹಗಳನ್ನು 35 ತುಂಡಾಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ 300 ಲೀಟರ್ ಸಾಮರ್ಥ್ಯದ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಬಳಿಕ ಅದನ್ನು ತೆಗೆದು, ದೆಹಲಿ ಮತ್ತು ಗುರುಗ್ರಾಮದ ಹಲವೆಡೆ ಎಸೆದು ಬಂದಿದ್ದ. ನವೆಂಬರ್ 12ರಂದು ಪೊಲೀಸರು ಆತನನ್ನು ಬಂಧಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT