ಶ್ರದ್ಧಾ ವಾಲ್ಕರ್ 
ದೇಶ

ಗರಗಸದಿಂದ ಶ್ರದ್ಧಾ ದೇಹ ತುಂಡರಿಸಿದ್ದ ಅಫ್ತಾಬ್: ಮರಣೋತ್ತರ ಪರೀಕ್ಷೆಯ ಸ್ಫೋಟಕ ಮಾಹಿತಿ

ದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ.

ನವದೆಹಲಿ: ದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ.

ಹೌದು.. ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲ್ಕರ್‌ ಅವರನ್ನು ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ವಿವಿಧೆಡೆ ಎಸೆದಿದ್ದ ಆರೋಪ ಎದುರಿಸುತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ಪ್ರಕರಣದ ತನಿಖೆ ಮುಂದುವರಿದಂತೆ ಆಘಾತಕಾರಿ ಸಂಗತಿಗಳು ಹೊರಬೀಳುತ್ತಿವೆ. ಹಾಲಿ ಹೊರಬಿದ್ದಿರುವ ಮರಣೋತ್ತರ ಪರೀಕ್ಷೆಯಲ್ಲಿ ಅಫ್ತಾಬ್ ತನ್ನ ಪ್ರಿಯತಮೆಯ ದೇಹ ಕತ್ತರಿಸಲು ಗರಗಸ ಬಳಸಿದ್ದ ಎಂಬ ಅಘಾತಕಾರಿ ಅಂಶವನ್ನು ತಜ್ಞರು ಬಯಲು ಮಾಡಿದ್ದಾರೆ.

ಶ್ರದ್ಧಾ ವಾಲ್ಕರ್ ಅವರ ದೇಹವನ್ನು ಗರಗಸ ಬಳಸಿ ತುಂಡರಿಸಿರುವುದು ಮೂಳೆಗಳ ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೆಹಲಿಯ ವಿವಿಧೆಡೆ ಸಂಗ್ರಹಿಸಿದ್ದ ಶ್ರದ್ಧಾ ವಾಲಕರ್ ಅವರ 23 ಮೂಳೆಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಏಮ್ಸ್ ಆಸ್ಪತ್ರೆಗೆ ಕಳುಹಿಸಿದ್ದರು. ಗರಗಸ ಬಳಸಿ ತುಂಡರಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜನವರಿ ಕೊನೆಯ ವಾರದಲ್ಲಿ ಪ್ರಕರಣ ಕುರಿತಂತೆ ಪೊಲೀಸರು ದೆಹಲಿಯ ಸಾಕೆತ್ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.

ಶ್ರದ್ಧಾ ವಾಲಕರ್ ತಂದೆಯ ಡಿಎನ್‌ಎ ಜೊತೆ ದಕ್ಷಿಣ ದೆಹಲಿಯ ಅರಣ್ಯ ಪ್ರದೇಶದಲ್ಲಿ ಸಿಕ್ಕ ಮೂಳೆಗಳ ಡಿಎನ್‌ಎ ಹೊಂದಿಕೆಯಾದ ಹಿನ್ನೆಲೆಯಲ್ಲಿ ಮರಣೋತ್ತರ(ಮೂಳೆಗಳ ಪರೀಕ್ಷೆ) ನಡೆಸಲಾಯಿತು ಎಂದು ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ. ಆರೋಪಿ ಆಫ್ತಾಬ್‌ನ ಪಾಲಿಗ್ರಾಫ್ ಮತ್ತು ನಾರ್ಕೊ ಪರೀಕ್ಷೆಯ ವರದಿಯನ್ನು ದೆಹಲಿ ಪೊಲೀಸರು ಪಡೆದುಕೊಂಡಿದ್ದಾರೆ.

ಮೇ 18, 2022ರಂದು ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದಿದ್ದ ಆಫ್ತಾಬ್, ಆಕೆಯ ಮೃತದೇಹಗಳನ್ನು 35 ತುಂಡಾಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ 300 ಲೀಟರ್ ಸಾಮರ್ಥ್ಯದ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಬಳಿಕ ಅದನ್ನು ತೆಗೆದು, ದೆಹಲಿ ಮತ್ತು ಗುರುಗ್ರಾಮದ ಹಲವೆಡೆ ಎಸೆದು ಬಂದಿದ್ದ. ನವೆಂಬರ್ 12ರಂದು ಪೊಲೀಸರು ಆತನನ್ನು ಬಂಧಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?