ಆರೋಪಿ ಶಂಕರ್ ಮಿಶ್ರಾ 
ದೇಶ

ವಿಮಾನದಲ್ಲಿ 'ಮೂತ್ರ ವಿಸರ್ಜನೆ' ಘಟನೆ: ಶಂಕರ್ ಮಿಶ್ರಾ ಹೇಳಿಕೆ ಅವಹೇಳನಕಾರಿ ಎಂದ ದೂರುದಾರ ಮಹಿಳೆ!

ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ನಿನ್ನೆ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯನ್ನು ನಿರಾಕರಿಸಿರುವ ದೂರುದಾರು ಮಹಿಳೆ, ತಾನೇ ಮೂತ್ರ ವಿಸರ್ಜನೆ ಮಾಡಿರುವ ಸಾಧ್ಯತೆಯಿರುವುದಾಗಿ ಹೇಳಿರುವುದು ಸಂಪೂರ್ಣ ಸುಳ್ಳು ಮತ್ತು ಹುಸಿಯಾಗಿದ್ದು, ಸಹಜವಾಗಿ ಅವಹೇಳನಕಾರಿಯಾಗಿದೆ ಎಂದು ಆರೋಪಿಸಿದ್ದಾರೆ. 

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ನಿನ್ನೆ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯನ್ನು ನಿರಾಕರಿಸಿರುವ ದೂರುದಾರು ಮಹಿಳೆ, ತಾನೇ ಮೂತ್ರ ವಿಸರ್ಜನೆ ಮಾಡಿರುವ ಸಾಧ್ಯತೆಯಿರುವುದಾಗಿ ಹೇಳಿರುವುದು ಸಂಪೂರ್ಣ ಸುಳ್ಳು ಮತ್ತು ಹುಸಿಯಾಗಿದ್ದು, ಸಹಜವಾಗಿ ಅವಹೇಳನಕಾರಿಯಾಗಿದೆ ಎಂದು ಆರೋಪಿಸಿದ್ದಾರೆ. 

ಕಸ್ಟಡಿ ವಿಚಾರಣೆ ನಿರಾಕರಿಸಿ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯ ನೀಡಿದ ಆದೇಶ ಪರಿಷ್ಕರಿಸಲು ಕೋರಲಾಗಿದ್ದ ಪೊಲೀಸ್ ಅರ್ಜಿಯ ವಿರುದ್ಧ ಶುಕ್ರವಾರ ವಾದ ಮಂಡಿಸಿದ ಮಿಶ್ರಾ ಪರ ವಕೀಲರು, ತಮ್ಮ ಕಕ್ಷಿದಾರ ಅಪರಾಧ ಮಾಡಿಲ್ಲ, ದೂರುದಾರ ಮಹಿಳೆಯೇ ಮೂತ್ರ ವಿಸರ್ಜನೆ ಮಾಡಿರುವುದಾಗಿ ಹೇಳಿದ್ದರು. 

ಆರೋಪಿ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಹುಸಿಯಾಗಿದ್ದು, ಸ್ವಭಾವತ:ವಾಗಿ ಅವಹೇಳನಕಾರಿಯಾಗಿದೆ. ಹೇಳಲಾದ ಆರೋಪಗಳು ಸಂಪೂರ್ಣ ವಿರೋಧಾಭಾಸದಿಂದ ಕೂಡಿವೆ ಎಂದು ದೂರುದಾರ ಮಹಿಳೆ ಪರ ವಕೀಲ ಅಂಕೂರ್ ಮಹೀಂದ್ರೋ ಹೇಳಿದ್ದಾರೆ.

 ಆರೋಪಿ ತಾನು ಮಾಡಿರುವ ಅಸಹ್ಯಕರ ಕೃತ್ಯಕ್ಕಾಗಿ ಪಶ್ಚಾತ್ತಾಪ ಪಡುವ ಬದಲು, ದೂರುದಾರ ಮಹಿಳೆಗೆ ಮತ್ತಷ್ಟು ಕಿರುಕುಳ ನೀಡುವ ಉದ್ದೇಶದಿಂದ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹೇಳುತ್ತಿರುವುದಾಗಿ ಅವರು ತಿಳಿಸಿದ್ದಾರೆ. 

ಹಲವಾರು ಕಥಕ್ ನೃತ್ಯಗಾರರು ಬಳಲುತ್ತಿರುವಂತೆ ಪ್ರಾಸ್ಟೇಟ್ ಗೆ ಸಂಬಂಧಿಸಿದ ಕೆಲವು ಕಾಯಿಲೆಗಳಿಂದ ದೂರುದಾರ ಮಹಿಳೆ ಬಳಲುತ್ತಿದ್ದಾರೆ ಎಂದು ಮಿಶ್ರಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT