ಶರದ್ ಯಾದವ್ ಪಾರ್ಥಿವ ಶರೀರ 
ದೇಶ

ಮಧ್ಯ ಪ್ರದೇಶ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಹಿರಿಯ ಸಮಾಜವಾದಿ ನಾಯಕ ಮತ್ತು ಜನತಾ ದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ...

ಭೋಪಾಲ್: ಹಿರಿಯ ಸಮಾಜವಾದಿ ನಾಯಕ ಮತ್ತು ಜನತಾ ದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಮಾಜಿ ಕೇಂದ್ರ ಸಚಿವರ ಶರದ್ ಯಾದವ್ ಅವರ ಪುತ್ರ ಶಂತನು ಬುಂದೇಲಾ ಮತ್ತು ಅವರ ಪುತ್ರಿ ಸುಭಾಸಿನಿ ಅವರು ಇಂದು ಸಂಜೆ 5 ಗಂಟೆ ಸುಮಾರಿಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

75 ವರ್ಷದ ಶರದ್ ಯಾದವ್ ಅವರು ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಯಾದವ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಭೋಪಾಲ್ ಚಾರ್ಟರ್ಡ್ ವಿಮಾನದಲ್ಲಿ ತರಲಾಯಿತು. ಬಳಿಕ ಪಾರ್ಥಿವ ಶರೀರವನ್ನು ರಸ್ತೆಯ ಮೂಲಕ ಅಂಕ್ಮೌಗೆ ಕೊಂಡೊಯ್ಯಲಾಯಿತು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT