ಜೋಶಿಮಠ ಭೂಕುಸಿತ 
ದೇಶ

ಸಚಿವರ ಸೂಚನೆ ಮೇರೆಗೆ ಜೋಶಿಮಠದ ಉಪಗ್ರಹ ಚಿತ್ರ, ವರದಿ ತೆಗೆದು ಹಾಕಿದ ಇಸ್ರೋ

ರಾಜ್ಯ ಸರ್ಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಪ್ರಕಟಿಸಿದ್ದ ಉಪಗ್ರಹ ಚಿತ್ರಗಳನ್ನು ಮತ್ತು ವರದಿಯನ್ನು ತೆಗೆದುಹಾಕಿದೆ. 

ಜೋಶಿಮಠ: ರಾಜ್ಯ ಸರ್ಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಪ್ರಕಟಿಸಿದ್ದ ಉಪಗ್ರಹ ಚಿತ್ರಗಳನ್ನು ಮತ್ತು ವರದಿಯನ್ನು ತೆಗೆದುಹಾಕಿದೆ. 

ಜೋಶಿಮಠದ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ಇಲ್ಲಿಯೇ ಮೊಕ್ಕಾಂ ಹೂಡಿರುವ ರಾಜ್ಯ ಕ್ಯಾಬಿನೆಟ್ ಸಚಿವ ಡಾ ಧನ್ ಸಿಂಗ್ ರಾವತ್ ಅವರು ಇಸ್ರೋ ಅಧಿಕಾರಿಗಳನ್ನು ಸಂಪರ್ಕಿಸಿದ ನಂತರ ಇದನ್ನು ಖಚಿತಪಡಿಸಿದ್ದಾರೆ.

ಈ ಮಧ್ಯೆ, ವಿಜ್ಞಾನಿಗಳು, ಭೂವಿಜ್ಞಾನಿಗಳು ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳು ಜೋಶಿಮಠದ ಭೂ ಕುಸಿತಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ವರದಿ, ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ವಾಸ್ತವವಾಗಿ, ಇಸ್ರೋದ ಈ ವರದಿಯು ಕಳೆದ 12 ದಿನಗಳಲ್ಲಿ ಅಂದರೆ 27 ಡಿಸೆಂಬರ್ 2022 ರಿಂದ ಜನವರಿ 8, 2023 ರವರೆಗೆ ಜೋಶಿಮಠದಲ್ಲಿ 5.4 ಸೆಂ.ಮೀ ಭೂಕುಸಿತವಾಗಿದೆ ಎಂದು ಹೇಳಿತ್ತು. ಕಳೆದ ಏಳು ತಿಂಗಳಲ್ಲಿ ಜೋಶಿಮಠದಲ್ಲಿ 9 ಸೆಂ.ಮೀ ಭೂಕುಸಿತವಾಗಿದೆ ಎಂದು ಇಸ್ರೋ ಕಾಟ್ರೋಸ್ಯಾಟ್ -2ಎಸ್ ಉಪಗ್ರಹದಿಂದ ತೆಗೆದ ಚಿತ್ರದ ಆಧಾರದಲ್ಲಿ ಹೇಳಿತ್ತು.

ಜೋಶಿಮಠ ಮುಳುಗಡೆಗೆ ಸಂಬಂಧಿಸಿದ ಇಸ್ರೋ ಚಿತ್ರಗಳು ವೈರಲ್ ಆದ ನಂತರ ಮತ್ತು ಟಿವಿ ಚಾನೆಲ್‌ಗಳಲ್ಲಿ ಸುದ್ದಿ ಪ್ರಸಾರವಾದ ಬಳಿಕ ಜೋಶಿಮಠ ನಗರದ ಜನರಲ್ಲಿ ಭೀತಿ ಹೆಚ್ಚಾಗಿತ್ತು. ಉಪಗ್ರಹ ಚಿತ್ರಗಳ ಬಗ್ಗೆ ಅಧಿಕೃತ ಹೇಳಿಕೆ ನೀಡುವಂತೆ ಅಥವಾ ವೆಬ್‌ಸೈಟ್‌ನಿಂದ ಫೋಟೋಗಳನ್ನು ತೆಗೆದುಹಾಕುವಂತೆ ಇಸ್ರೋಗೆ ಕೇಳಿಕೊಂಡಿದೆ ಎಂದು ಸಚಿವ ಡಾ ಧನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT