ಒಡಿಶಾದಲ್ಲಿ ಮಕರ ಮೇಳ 
ದೇಶ

ಒಡಿಶಾದಲ್ಲಿ ಮಕರ ಮೇಳದ ವೇಳೆ ಕಾಲ್ತುಳಿತ; ಓರ್ವ ಸಾವು, 20 ಮಂದಿಗೆ ಗಾಯ

ಒಡಿಶಾದ ಕಟಕ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಕರ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟಕ್: ಒಡಿಶಾದ ಕಟಕ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಕರ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಕರ ಮೇಳದ ನಿಮಿತ್ತ ಬದಂಬಾ-ಗೋಪಿನಾಥಪುರ ಟಿ-ಬ್ರಿಡ್ಜ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆಯಲ್ಲಿ 45 ವರ್ಷದ ಅಂಜನಾ ಸ್ವೈನ್ ಎಂದು ಗುರುತಿಸಲಾದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಕಟಕ್ ನಗರದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬದಂಬಾ-ನರಸಿಂಗ್‌ಪುರ ಶಾಸಕ ಮತ್ತು ಮಾಜಿ ಸಚಿವ ದೇಬಿ ಪ್ರಸಾದ್ ಮಿಶ್ರಾ ಅವರು ತಿಳಿಸಿದ್ದಾರೆ.

ಇತರ ಗಾಯಗೊಂಡ ವ್ಯಕ್ತಿಗಳನ್ನು ಬದಂಬಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ(ಸಿಎಚ್‌ಸಿ) ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ಮಕರ ಮೇಳದ ವೇಳೆ ಆಯೋಜಿಸಲಾಗಿದ್ದ ಜಾತ್ರೆಗೆ ಮತ್ತು ಸಿಂಹನಾಥನ ದರ್ಶನಕ್ಕೆಂದು ಆಗಮಿಸಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಭಕ್ತರ ಸಂಖ್ಯೆ ಏಕಾಏಕಿ ಹೆಚ್ಚಾದ ಕಾರಣ ಈ ಘಟನೆ ನಡೆದಿದೆ ಎಂದು ಅಥಗಢ ಸಬ್ ಕಲೆಕ್ಟರ್ ಹೇಮಂತ ಕುಮಾರ್ ಸ್ವೈನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT