ಮೃತಪಟ್ಟ ಯುವಕ ಅರವಿಂದ್ ರಾಜ್ 
ದೇಶ

ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ: 9 ಹೋರಿ ತಡೆದು ಮುಂಚೂಣಿಯಲ್ಲಿದ್ದ ಯುವಕ ಸಾವು

ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ ವೇಳೆ ಅಖಾಡದಲ್ಲಿ ಗೂಳಿ ಪಳಗಿಸಲು ಯತ್ನಿಸಿದ 26 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಮಧುರೈ: ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ ವೇಳೆ ಅಖಾಡದಲ್ಲಿ ಗೂಳಿ ಪಳಗಿಸಲು ಯತ್ನಿಸಿದ 26 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಚಿಕಿತ್ಸೆಗಾಗಿ ಮಧುರೈನ ಜಿ ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕ ದುರ್ಮರಣ ಹೊಂದಿರುವುದಾಗಿ ತಿಳಿದುಬಂದಿದೆ. ಮಧ್ಯಾಹ್ನದ ವೇಳೆಗೆ, ಜಲ್ಲಿಕಟ್ಟು ಸ್ಪರ್ಧೆ ವೇಳೆ ಒಬ್ಬ ಪತ್ರಕರ್ತ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲೆಯಾದ್ಯಂತ ನೂರಾರು ಹೋರಿಗಳನ್ನು ವಾಡಿವಾಸಲ್ (ಪ್ರವೇಶ ಸ್ಥಳ) ಮೂಲಕ ಬಿಡಲಾಯಿತು. ಈ ವೇಳೆ  25-30 ಹೋರಿ ಪಳಗಿಸುವವರಿಗೆ ಅನುಮತಿ ನೀಡಲಾಯಿತು. ತದನಂತರ ನಾಲ್ಕನೇ ಸುತ್ತಿನ  ವೇಳೆಗೆ ಸುಮಾರು 400 ಹೋರಿಗಳನ್ನು ಬಿಡಲಾಯಿತು.

9 ಹೋರಿಗಳನ್ನು ತಡೆದು ಐದನೇ ಸುತ್ತಿನಲ್ಲಿ ಮುಂಚೂಣಿಯಲ್ಲಿದ್ದ 26 ವರ್ಷದ ಯುವಕ ಅರವಿಂದ್ ರಾಜ್ ಅವರ ಹೊಟ್ಟೆಗೆ ಗೂಳಿ ತಿವಿದು ನೆಲಕ್ಕೆ ಎಸೆದಿದೆ. ದಾಳಿ ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೆ ಆತನ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮುಂದಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT