ರಾಹುಲ್ ಗಾಂಧಿ 
ದೇಶ

ಪಂಜಾಬ್ ಸಿಎಂ ಭಗವಂತ್ ಮಾನ್ ಯಾರೊಬ್ಬರ ರಿಮೋಟ್ ಕಂಟ್ರೋಲ್ ಆಗಬಾರದು: ರಾಹುಲ್ ಗಾಂಧಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪಂಜಾಬ್ ಸಿಎಂ ಯಾರೊಬ್ಬರ ರಿಮೋಟ್ ಕಂಟ್ರೋಲ್‌ ಆಗಬಾರದು ಮತ್ತು ರಾಜ್ಯವನ್ನು ಸ್ವತಂತ್ರವಾಗಿ ನಡೆಸಬೇಕು...

ಹೋಶಿಯಾರ್ಪುರ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪಂಜಾಬ್ ಸಿಎಂ ಯಾರೊಬ್ಬರ ರಿಮೋಟ್ ಕಂಟ್ರೋಲ್‌ ಆಗಬಾರದು ಮತ್ತು ರಾಜ್ಯವನ್ನು ಸ್ವತಂತ್ರವಾಗಿ ನಡೆಸಬೇಕು ಎಂದು ಸೋಮವಾರ ಹೇಳಿದ್ದಾರೆ.

ಹೋಶಿಯಾರ್ಪುರದಲ್ಲಿ ಇಂದು ಭಾರತ್ ಜೋಡೋ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಪಂಜಾಬ್ ಅನ್ನು ಪಂಜಾಬ್‌ನಿಂದಲೇ ನಡೆಸಬೇಕು. ಅದನ್ನು ದೆಹಲಿಯಿಂದ ನಡೆಸಬಾರದು ಎಂದು ಹೇಳಿದರು. 

ನಾನು ಪಂಜಾಬ್ ಸಿಎಂ ಭಗವಂತ್ ಮಾನ್ ಅವರನ್ನು ಕೇಳಲು ಬಯಸುತ್ತೇನೆ ನೀವು ಪಂಜಾಬ್‌ನ ಮುಖ್ಯಮಂತ್ರಿ, ಪಂಜಾಬ್ ನಲ್ಲಿ ನೀವೇ ಅಧಿಕಾರ ಚಲಾಯಿಸಬೇಕು. ಭಗವಂತ್ ಮಾನ್ (ಅರವಿಂದ್) ಕೇಜ್ರಿವಾಲ್ ಜಿ ಮತ್ತು ದೆಹಲಿಯ ಒತ್ತಡಕ್ಕೆ ಒಳಗಾಗಬಾರದು" ಎಂದರು.

"ನೀವು ಸ್ವತಂತ್ರವಾಗಿ ಕೆಲಸ ಮಾಡಬೇಕು ಮತ್ತು ಯಾರೊಬ್ಬರ ರಿಮೋಟ್ ಕಂಟ್ರೋಲ್ ಅಡಿಯಲ್ಲಿ ಇರಬಾರದು" ಎಂದು ರಾಹುಲ್ ಗಾಂಧಿ ಹೇಳಿದರು.

ಭಗವಂತ್ ಮಾನ್ ಅವರ ಸರ್ಕಾರದ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT