ಪ್ರಾತಿನಿಧಿಕ ಚಿತ್ರ 
ದೇಶ

ಆಕ್ಸಿಜನ್ ಸಿಲಿಂಡರ್‌ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ

ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

ನವದೆಹಲಿ: ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಸಿಲಿಂಡರ್‌ಗಳನ್ನು ತೆಗೆದುಕೊಂಡು ಹೋಗುವಂತೆ ಬಿಜೆಪಿ ಸದಸ್ಯರನ್ನು ಕೇಳಿಕೊಂಡರು ಮತ್ತು ಭದ್ರತೆಯ ಹೊರತಾಗಿಯೂ ಅವುಗಳನ್ನು ಹೇಗೆ ಸದನದೊಳಗೆ ತಂದರು ಎಂದು ಪ್ರಶ್ನಿಸಿದರು.
ತಪ್ಪಾಗಿರುವುದನ್ನು ಕಂಡುಕೊಂಡ ಅವರು, ಈ ಸಂಬಂಧ ಭದ್ರತಾ ಸಿಬ್ಬಂದಿಯನ್ನು ತಮ್ಮ ಕೋಣೆಗೆ ಕರೆದು ವಿಚಾರಿಸಿದರು.

ಆದಾಗ್ಯೂ, ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹಸ್ತಕ್ಷೇಪದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ಉಂಟಾಯಿತು. ಬಳಿಕ ದೆಹಲಿ ವಿಧಾನಸಭೆಯನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಎಎಪಿ ಶಾಸಕ ಸೌರಭ್ ಭಾರದ್ವಾಜ್ ಅವರು, ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿಯಲ್ಲಿ ಕಾನೂನುಬಾಹಿರ ಮತ್ತು ಅನಗತ್ಯ ಅಡೆತಡೆಗಳು ಮತ್ತು ಹಸ್ತಕ್ಷೇಪಗಳ ಕುರಿತು ಗಮನ ಸೆಳೆಯುವ ಚರ್ಚೆಯನ್ನು ಪ್ರಾರಂಭಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT