ಯುವತಿ ಕುಟುಂಬಸ್ಥರಿಂದ ಪ್ರತಿಭಟನೆ 
ದೇಶ

ಕಾಂಜಾವಾಲ ಪ್ರಕರಣ: ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ...

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ತಿಳಿಸಿದ್ದಾರೆ.

ಕಾಂಜಾವಾಲ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 302 ಅಡಿ ಕೇಸ್ ದಾಖಲಿಸಲಿದ್ದಾರೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಕೋರ್ಟ್ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಆರೋಪಿಗಳಿಗೆ ಮರಣದಂಡನೆ ಅಥವಾ ಜೀವಾವಧಿಯ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.

ಪ್ರಕರಣದ ಏಳು ಆರೋಪಿಗಳ ಪೈಕಿ ಆರು ಮಂದಿಯ ಮೇಲೆ ಆರಂಭದಲ್ಲಿ ಕಲಂ 304 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಆದರೆ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು ಕಳೆದ ಮಂಗಳವಾರ ಸುಲ್ತಾನ್‌ಪುರಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT